ಅಕ್ರಮ-ಸಕ್ರಮದಲ್ಲಿ ರಾಜಕೀಯ ಮಾಡುವುದು ಬೇಡ: ಶಾಸಕ ಕೋಟ್ಯಾನ್

Date:

ಮೂಡುಬಿದಿರೆ: ಕಂದಾಯ ಸಚಿವರಾಗಿರುವ ಕೃಷ್ಣ ಭೈರೇಗೌಡ ಅವರು ಅಕ್ರಮ ಸಕ್ರಮಕ್ಕೆ ಕೆಲವೊಂದು ಕಠಿಣ ಕಾನೂನು ತಂದಿರುವುದರಿಂದ ಅರ್ಜಿದಾರರ ವಿವರಗಳೆಲ್ಲಾ ಆಪ್ ಮೂಲಕವೇ ದಾಖಲಾಗಬೇಕಿದೆ, ಹಾಗಾಗಿ ಅರ್ಜಿ ವಿಲೇವಾರಿ ವಿಳಂಬವಾಗುತ್ತಿದೆ ಹೊರತು ತಾನು ಅಕ್ರಮ ಸಕ್ರಮ ಸಮಿತಿಯ ವಿಚಾರದಲ್ಲಿ ರಾಜಕೀಯ ಮಾಡಿಲ್ಲ ಆದ್ದರಿಂದ ಬೇರೆಯವರೂ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.

ಇತ್ತೀಚೆಗೆ ಮಿತ್ತಬೈಲು ವಾಸುದೇವ ನಾಯಕ್ ಅವರು ಪತ್ರಿಕಾಗೋಷ್ಠಿ ನಡೆಸಿ ‘ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರಾಗಿರುವ ಶಾಸಕರು ಈ ಸಮಿತಿಗಳ ಮೀಟಿಂಗ್ ಮಾಡದೆ ಬಡ ಜನರಿಗೆ ಅನ್ಯಾಯವೆಸಗುತ್ತಿದ್ದಾರೆ’ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕೋಟ್ಯಾನ್ ಅವರು ಸ್ಪಷ್ಟನೆ ನೀಡಲು ಗುರುವಾರ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈಗ ಹತ್ತು ಫೈಲುಗಳು ರೆಡಿಯಾಗಿದ್ದು ಅದನ್ನು ಶೀಘ್ರದಲ್ಲೇ ನೀಡುವ ವ್ಯವಸ್ಥೆ ಮಾಡುತ್ತೇವೆ, ಉಳಿದಂತೆ ಹಂತಹಂತವಾಗಿ ನೀಡಿತ್ತೇವೆ ‘ ಎಂದು ಸ್ಪಷ್ಟಪಡಿಸಿದರು.

ನಾನು ಕಳೆದ ಅವಧಿಯಲ್ಲಿ ಅಕ್ರಮಸಕ್ರಮ ಸಮಿತಿಯಲ್ಲಿ ಸಾಕಷ್ಟು ಜನರಿಗೆ ಹಕ್ಕುಪತ್ರ ನೀಡಿದ್ದೇನೆ, ನನ್ನ ಕಚೇರಿಗೆ ಬಂದ ಯಾರಿಗೂ ಆ ಪಕ್ಷದವನು,ಈ ಪಕ್ಷದವನು ಎಂದು ತಾರತಮ್ಯ ಮಾಡಿಲ್ಲ, ಸಾಕಷ್ಟು ಅನುಭವಿಯಾಗಿರುವ ವಾಸುದೇವ ನಾಯಕ್ ಅವರು ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಯಾಕೆ ಎಂದು ಅರ್ಥವಾಗುತ್ತಿಲ್ಲವೆಂದರು. ನಾನು ಈ ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡಿಲ್ಲ ವಾಸುದೇವ ನಾಯಕರೂ ರಾಜಕೀಯ ಮಾಡುವುದು ಬೇಡ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಶಾಂತಿಪ್ರಸಾದ್ ಹೆಗ್ಡೆ, ಬಾಹುಬಲಿ ಪ್ರಸಾದ್,ರಂಜಿತ್ ಪೂಜಾರಿ, ಜಯಶ್ರೀ ಕೇಶವ್, ನಾಗರಾಜ್ ಪೂಜಾರಿ, ಸುಕೇಶ್ ಶೆಟ್ಟಿ ಎದಮಾರು, ಗೋಪಾಲ ಶೆಟ್ಟಿಗಾರ್, ಲಕ್ಷ್ಮಣ ಪೂಜಾರಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...