ಮಂಗಳೂರು ವಿವಿಯಲ್ಲಿ ‘ಗಿಳಿವಿಂಡು’ ಕಾರ್ಯಕ್ರಮ

Date:

ಕೊಣಾಜೆ:: ಸಮಾಜಕ್ಕೆ ಕನ್ನಡದ ಕೊಡುಗೆ ಅಪಾರ. ಕನ್ನಡಕ್ಕೆ ವಿಶೇಷ ಶಕ್ತಿ ಇದೆ. ಕನ್ನಡವನ್ನು ಎಂದಿಗೂ ಹೀನವಾಗಿ ನೋಡದೆ ಕನ್ನಡಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳೋಣ. ಮಂಗಳೂರು ವಿವಿಯ ಕನ್ನಡ ಅಧ್ಯಯನ ಸಂಸ್ಥೆಯು ಗಿಳಿವಿಂಡುವಿನ ಮೂಲಕ ಕನ್ನಡಪರ ಮನಸ್ಸುಗಳನ್ನು ಒಟ್ಟುಗೂಡಿಸಿರುವುದು ಶ್ಲಾಘನೀಯವಾಗಿದೆ ಮಂಗಳೂರು ವಿವಿ ಕನ್ನಡ ವಿಭಾಗದ ಪ್ರಥಮ ತಂಡದ ವಿದ್ಯಾರ್ಥಿ ಹಾಗೂ ಕೆನರಾ‌ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಶಂಕರ್ ಶೆಟ್ಟಿ ಅವರು ಹೇಳಿದರು.


ಮಂಗಳೂರು ವಿವಿಯ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆ ಗಿಳಿವಿಂಡು(ರಿ), ಹಿರಿಯ ವಿದ್ಯಾರ್ಥಿ,‌ಅದ್ಯಾಪಕ ಹಾಗೂ ಸಿಬ್ಬಂದಿಗಳ ಒಕ್ಕೂಟ, ಮಂಗಳಗಂಗೋತ್ರಿ ಇದರ ಆಶ್ರಯದಲ್ಲಿ ‘ಬಾರಿಸು ಕನ್ನಡ ಡಿಂಡಿಮವ, ಗಿಳಿವಿಂಡು ಯಾನ- ಮರಳಿ ಮನೆಗೆ’ ಎಂಬ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕನ್ನಡದ ಪ್ರಥಮ ಬ್ಯಾಚ್ ನಲ್ಲಿ 1968 ರಲ್ಲಿ 17 ಮಂದಿ ಒಡನಾಡಿಗಳಾಗಿದ್ದೆವು. ಎಲ್ಲರೂ ಕನ್ನಡ ಅಧ್ಯಯನದ ಮೂಲಕ ಉತ್ತಮ ಸಾಧನೆ ಮಾಡಿ ಗುರುಗಳಾದ ಎಸ್ ವಿಪಿ ಪರಮೇಶ್ಬರ ಭಟ್ಟರಿಗೆ ಗೌರವ ತಂದುಕೊಟ್ಟಿದ್ದೇವೆ. ಪರಮೇಶ್ವರ ಭಟ್ಟರ ಪಾಠದ ವೈಖರಿ ಅಪೂರ್ವವಾದುದು. ಅಂತಹ ಗುರುಗಳ ಅಡಿಯಲ್ಲಿ ಕಲಿತ ನಾವೆಲ್ಲರೂ ಧನ್ಯರು ಎಂದರು.
ವಿವಿ ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರೊ.ಚಂದ್ರಕಲಾ ನಂದಾವರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಓದುವ ಆಸಕ್ತಿಯನ್ನು ಮೀರಿದ್ದು ಯಾವುದೇ ಇಲ್ಲ. ಆದ್ದರಿಂದ ಎಲ್ಲರೂ ಓದಿನ ಹವ್ಯಾಸವನ್ನು ಬೆಳೆಸಿಕೊಳ್ಳಬೇಕಿದೆ. ಸಾಹಿತ್ಯ ಹಾಗೂ ಸಾಹಿತ್ಯದ ಓದಿನಲ್ಲಿ ಒಂದು ಜೀವಾನುಭವ ಇರುತ್ತದೆ. ಬದುಕಿನ ಶಕ್ತಿಯನ್ನು ಅದು ಕಟ್ಟಿಕೊಡುತ್ತದೆ. ಗಿಳಿವಿಂಡುವಿನ ಮೂಲಕ ಕನ್ನಡದ ಕೆಲಸಗಳು ಮುಂದುವರಿಯಲಿ ಎಂದರು.
ಸಮಾರಂಭದಲ್ಲಿ ಗಿಳಿವಿಂಡುವಿನ ಸಹಕಾರ್ಯದರ್ಶಿ ಡಾ. ನರಸಿಂಹ ಮೂರ್ತಿ ಹಾಗೂ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗಿಳಿವಿಂಡುವಿನ ಅಧ್ಯಕ್ಷರು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಬಿ.ಶಿವರಾಮ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ.ನಾಗಪ್ಪ ಗೌಡ ಅವರು ಸ್ವಾಗತಿಸಿದರು. ಅಧ್ಯಾಪಕರಾದ ಡಾ‌.ಧನಂಜಯ ಕುಂಬ್ಳೆ ಅವರು ವಂದಿಸಿದರು. ಡಾ.ಯಶುಕುಮಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...

ಸೆ. 14 ರಂದು ಸುರಿಬೈಲ್ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್

ಕಲ್ಲಡ್ಕ: ಬದ್ರಿಯಾ ಜುಮ್ಮಾ ಮಸೀದಿ ಸುರಿಬೈಲ್ ಇದರ ಅಧೀನದಲ್ಲಿರುವ ನುಸ್ರತುಲ್ ಉಲೂಂ...