ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಗ್ರಾಹಕ ನ್ಯಾಯಾಲಯ ತೀರ್ಪು

Date:

ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದೆ.

ಘಟನೆಯ ವಿವರ

ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಿಂದ ವಾಹವನ್ನು ಖರೀದಿಸಿದ್ದರು. ಓಲಾ ಸ್ಕೂಟರ್‌ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು.

ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.

ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ಹಠಾತ್ತನೆ ನಿಲ್ಲುತ್ತಿತ್ತು. ಇದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್‌ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು.

ಈ ಹಿನ್ನೆಲೆಯಲ್ಲಿ ಲೀಗಲ್ ನೋಟೀಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.

ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್‌ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾನ್ಯೂನ್ಯತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ.

ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ಅವರು ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...