ಮಂಗಳೂರು ವಿವಿ: ಬ್ಯಾರಿ ಅಧ್ಯಯನ ಪೀಠದಿಂದ ಬ್ಯಾರಿ ಭಾಷಾ ದಿನಾಚರಣೆ

Date:

ಮಂಗಳೂರು, ಅ.3: ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಬ್ಯಾರಿ ಅಧ್ಯಯನ ಪೀಠದಿಂದ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ಬ್ಯಾರಿ ಭಾಷಾ ದಿನ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಭಾಷೆಯ ಮೇಲೆ ಅಭಿಮಾನ ಮತ್ತು ಹೆಮ್ಮೆ ಬೇಕು. ಆದರೆ ಅದು ಯಾವತ್ತೂ ಸಂಘರ್ಷಕ್ಕೆ ಎಡೆಮಾಡಿಕೊಡಬಾರದು. ಭಾಷೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಸೌಹಾರ್ದ ವಾತಾವರಣ ರೂಪಿಸಬೇಕಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ಸೇವಕ ಫಾರೂಕ್ ಉಳ್ಳಾಲ್ ಉಪನ್ಯಾಸ ನೀಡಿದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬೆಳವಣಿಗೆಯ ನಿಟ್ಟಿನಲ್ಲಿ ಶ್ರಮಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯರುಗಳಾದ ಆಲಿಯಬ್ಬ ಜೋಕಟ್ಟೆ, ಯೂಸುಫ್ ವಕ್ತಾರ್, ಹುಸೈನ್ ಕಾಟಿಪಳ್ಳ ಅವರನ್ನು ಗೌರವಿಸಲಾಯಿತು. ಬ್ಯಾರಿ ಅಧ್ಯಯನ ಪೀಠದ ಸದಸ್ಯ ಬಿ.ಎ. ಮುಹಮ್ಮದ್ ಹನೀಫ್ ಅಭಿನಂದನಾ ಭಾಷಣ ಮಾಡಿದರು.ವೇದಿಕೆಯಲ್ಲಿ ಅಧ್ಯಯನ ಪೀಠದ ಸದಸ್ಯರಾದ ಉಮರ್ ಯು.ಎಚ್., ಬಶೀರ್ ಬೈಕಂಪಾಡಿ, ಖಾಲಿದ್ ತಣ್ಣೀರುಬಾವಿ, ಮೊಯಿದಿನ್ ಬಾದ್‌ಷಾ ಸಂಬಾರತೋಟ, ಹಂಝ ಮಲಾರ್ ಉಪಸ್ಥಿತರಿದ್ದರು.ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಡಾ.ಎನ್. ಇಸ್ಮಾಯೀಲ್ ವಂದಿಸಿದರು. ವಿದ್ಯಾರ್ಥಿನಿ ಆಯಿಶಾ ನಫೀಹಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...