
ಮಂಗಳೂರು 16/10/2022 ರಂದು ಮಂಗಳೂರಿನ ಲಾಲ್ ಬಾಗ್ ಜಂಕ್ಷನ್ ಬಳಿ ಬಸ್ ಮತ್ತು ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿ 13 ವರ್ಷ ಪ್ರಾಯದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಈ ಬಗ್ಗೆ ಮಂಗಳೂರು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಮತ್ತು ಚಾಲಕನಿಗೆ ಆ ಸಂದರ್ಭದಲ್ಲಿ ಬಸ್ ಚಾಲನೆ ಪರವಾನಿಗೆ ಇರಲಿಲ್ಲ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಐ.ಪಿ.ಸಿ ಕಾಲಂ 227, 338 ಮತ್ತು 304A ಹಾಗೂ 15(a) r/w 180 ಮೋಟಾರ್ ವಾಹನ ಕಾಯ್ದೆ ಅಡಿಯಲ್ಲಿ ದೋಷಾರೋಪಣ ಪಟ್ಟಿಯನ್ನು ಮಾನ್ಯ ಜೆಎಂಎಫ್.ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಪ್ರಕರಣವನ್ನು ಕೈಗೆತ್ತಿಕೊಂಡಾ ನ್ಯಾಯಾಲಯವು ಸಾಕ್ಷಿ ವಿಚಾರಣೆಯನ್ನು ನಡೆಸಿ ಸರ್ಕಾರಿ ಅಭಿಯೋಜಕರು ಹಾಗೂ ಆರೋಪಿ ಪರ ವಕೀಲರ ವಾದ ವಿವಾದಗಳನ್ನು ಆಲಿಸಿ ಈ ಪ್ರಕರಣದಲ್ಲಿ ಬಸ್ ಚಾಲಕನ ಯಾವುದೇ ತಪ್ಪು ಇಲ್ಲ ಎಂದು
ಮಂಗಳೂರಿನ 8ನೇ ಜೆಎಂಎಫ್.ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಶ್ರೀ ಪವಾಜ್ ಪಿ. ಎ ಅವರು ಈ ತೀರ್ಪು ನೀಡಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ಈ ಪ್ರಕರಣದ ಆರೋಪದಿಂದ ದಿನಾಂಕ 17.10.2025 ರಂದು ಖುಲಾಸೆಗೊಳಿಸಿ ಆದೇಶ ನೀಡಿದೆ.
ಆರೋಪಿ ಪರವಾಗಿ ಮಂಗಳೂರಿನ ಲೆಕ್ಸ್ ಜೂರಿಸ್ ಲಾ ಚೇಂಬರ್ ವಕೀಲರಾದ ಓಮರ್ ಫಾರೂಕ್ ಮುಲ್ಕಿ, ಮಹಮ್ಮದ್ ಅಸ್ಗರ್ ಮುಡಿಪು, ಹೈದರ್ ಅಲಿ ಕಿನ್ನಿಗೋಳಿ ಹಾಗೂ ಮಹಮ್ಮದ್ ಆದಿಲ್, ಅಯಾಜ್ ಚಾರ್ಮಾಡಿ, ನಿಶಾನ್ ಎಂ.ಕೆ. ಅವರು ವಾದ ಮಂಡಿಸಿದ್ದರು.


