ಟೀಮ್ ಹನುಮಾನ್ ವತಿಯಿಂದ ಸಹಾಯಧನ ಚೆಕ್ ಹಸ್ತಾಂತರ

Date:

ಉಳ್ಳಾಲ: ಯಾರೊಬ್ಬ ಶ್ರೀಮಂತ ಇಲ್ಲದಿದ್ದರೂ ಹದಿಹರೆಯದ ಯುವಕರು ವಿಭಿನ್ನ ರೀತಿಯಲ್ಲಿ ಸಮಾಜದ ಕಷ್ಟ, ಕಾರ್ಪಣ್ಯಗಳಿಗೆ ಸ್ಫಂದಿಸುತ್ತಿರುವುದು ಶ್ಲಾಘನೀಯ. ಟೀಮ್ ಹನುಮಾನ್ ಸಂಘಟನೆಯ ಸದಸ್ಯರು ಬೆಳಕಿನ ತಿಂಗಳಲ್ಲಿ ಅಶಕ್ತ ಕುಟುಂಬಕ್ಕೆ ಬೆಳಕು ಚೆಲ್ಲುವ ಸತ್ಕಾರ್ಯ ಮಾಡಿದ್ದಾರೆಂದು ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅಭಿಪ್ರಾಯಪಟ್ಟರು.

ಉಳ್ಳಾಲ ಧರ್ಮನಗರದ ನಾಗಬ್ರಹ್ಮ ಪರಿವಾರ ದೈವಗಳ ಕ್ಷೇತ್ರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಧರ್ಮನಗರ ’ಟೀಮ್ ಹನುಮಾನ್’ ಸಂಘಟನೆಯ ಸದಸ್ಯರು ’ಭವತೀ ಭಿಕ್ಷಾಂ ದೇಹಿ’ ಪರಿಕಲ್ಪನೆಯಡಿ ಕಳೆದ ನವರಾತ್ರಿಯಂದು ಯಕ್ಷ ವೇಷ ಧರಿಸಿ ಕ್ರೋಢೀಕರಿಸಿದ ಹಣ ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.
ಯಾರೊಬ್ಬ ಶ್ರೀಮಂತ ಇಲ್ಲದಿದ್ದರೂ ಹದಿಹರೆಯದ ಯುವಕರು ವಿಭಿನ್ನ ರೀತಿಯಲ್ಲಿ ಸಮಾಜದ ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿರುವುದು ಶ್ಲಾಘನಿಯ. ಈ ಸಂಘಟನೆ ಸಮಾಜಕ್ಕೆ ಮಾದರಿ ಎಂದರು.
ಚೀರುಂಭ ಭಗವತೀ ಕ್ಷೇತ್ರದ ಪ್ರಧಾನ ಅರ್ಚಕ ಮಂಜಪ್ಪ ಕಾರ್ನವರ್ ಟೀಮ್ ಹನುಮಾನ್ ಸಂಘಟನೆಯ ನೂತನ ಕಾರ್ಯಾಲಯ ‘ಹನುಮಾನ್ ಕುಠೀರ’ ಉದ್ಘಾಟಿಸಿ, ವೇಷ ಹಾಕಿ ಬಂದ ಆದಾಯದಲ್ಲಿ ಒಂದು ಪೈಸೆಯನ್ನೂ ದುರುಪಯೋಗಗೊಳಿಸದೆ ಸಮಾಜದ ಅಶಕ್ತರಿಗೆ ನೀಡುವ ಕಾರ್ಯ ದೇವರು ಮೆಚ್ಚುವಂಥದ್ದು ಎಂದರು.
ಕಳೆದ ನವರಾತ್ರಿಯಂದು ’ಟೀಮ್ ಹನುಮಾನ್’ ಸಂಘಟನೆಯ ಸದಸ್ಯರು ‘ಭವತೀ ಭಿಕ್ಷಾಂ ದೇಹಿ’ ಪರಿಕಲ್ಪನೆಯಡಿ ಯಕ್ಷವೇಷ ಧರಿಸಿ ಕ್ರೋಢೀಕರಿಸಿದ್ದ ೧,೦೫,೯೦೫ ರೂಪಾಯಿ ಸಹಾಯಧನ ಚೆಕ್ ಅಪಘಾತಕ್ಕೀಡಾಗಿ ಹಾಸಿಗೆ ಹಿಡಿದಿರುವ ಕಾರ್ಕಳದ ನಾರಾವಿ ನಿವಾಸಿ ಶ್ರವಣ್ ಅವರ ಪೋಷಕರಿಗೆ ಹಸ್ತಾಂತರಿಸಲಾಯಿತು. ಅಲ್ಲದೆ ಸ್ಥಳೀಯ ಸಂಘಟನೆ ಸ್ವಾಗತ್ ಫ್ರೆಂಡ್ಸ್ ಆಂಬ್ಯುಲೆನ್ಸ್ ಸೇವೆ ಹಾಗೂ ಮಾಸ್ತಿಕಟ್ಟೆ ವೀರಾಂಜನೇಯ ವ್ಯಾಯಾಮ ಶಾಲಾ ಕಾಮಗಾರಿಗೆ ಸಹಾಯಧನದ ಚೆಕ್ ಹಸ್ತಾಂತರಿಸಲಾಯಿತು. ಉಳ್ಳಾಲ ಬೈಲ್ ಅಂಗನವಾಡಿ ಕೇಂದ್ರಕ್ಕೆ ಎರಡು ಗಡಿಯಾರಗಳನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಒಂಬತ್ತುಕೆರೆಯ ಅಧ್ಯಕ್ಷ ಶರತ್ ಗಟ್ಟಿ ಸೋಮೇಶ್ವರ, ಸೋಮನಾಥ ಫ್ರೆಂಡ್ಸ್ ಅಧ್ಯಕ್ಷ ಸತೀಶ್ ನಾಯಕ್, ಧರ್ಮನಗರ ನಾಗಬನದ ಅಧ್ಯಕ್ಷ ನಾಗೇಶ್ ಉಳ್ಳಾಲ್, ರಾಹುಗುಳಿಗ ಬನದ ಅಧ್ಯಕ್ಷ ಭಾಸ್ಕರ ತೆಂಗಿನ ಹಿತ್ಲು, ಮಹಿಳಾ ಸಂಘದ ಅಧ್ಯಕ್ಷೆ ರತಿ ಶಂಕರ್, ಯಕ್ಷವೇಷ ಕಲಾವಿದರಾದ ವಿಘ್ನೇಶ್ ಕುಮಾರ್ ಬೋಳೂರು, ಗುತ್ತಿಗೆದಾರ ರಿಚರ್ಡ್ ವೇಗಸ್, ಬಿಜೆಪಿ ಮಂಗಳೂರು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಧವಿ ಉಳ್ಳಾಲ್, ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಮಿತ ಅಶ್ವಿನ್, ಕಾಂಗ್ರೆಸ್ ಮುಖಂಡ ನವನೀತ್ ಉಳ್ಳಾಲ್, ಸ್ವಾಗತ್ ಫ್ರೆಂಡ್ಸ್ ಅಧ್ಯಕ್ಷ ಧನರಾಜ್, ಟೀಮ್ ಹನುಮಾನ್ ಅಧ್ಯಕ್ಷ ಸಂಪತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಟೀಮ್ ಹನುಮಾನ್ ಸದಸ್ಯ ತಿಲಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೃಥ್ವಿ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...