ಮಾಂಟ್ರಾಡಿಯಲ್ಲಿ ಟ್ರ್ಯಾಕ್ಟರ್ ಸಹಿತ ಯುವಕ ಬಾವಿಗೆ ಬಿದ್ದು ಸಾವು

Date:

ಮೂಡುಬಿದಿರೆ : ಪಕ್ಕದ ಮನೆಯವರ ಟ್ರ್ಯಾಕ್ಟರ್ ನ್ನು ರಿವಸ್ ೯ ತೆಗೆಯಲು ಹೋಗಿ ಯುವಕನೊಬ್ಬ ವಾಹನ ಸಹಿತ ಬಾವಿಗೆ ಬಿದ್ದು ಸಾವನ್ನಪ್ಪಿದ ದುಘ೯ಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟುವಿನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೊಂಬೆಟ್ಟು ನಿವಾಸಿ ರಾಜೇಶ್ (38)ಮೃತ ದುರ್ದೈವಿ.​ ರಾಜೇಶ್ ಅವರು ತಮ್ಮ ಮನೆಯ ಪಕ್ಕದಲ್ಲಿರುವ ಸಂಬಂಧಿಕರ ವಾಹನವನ್ನು (ಗಾಡಿಯನ್ನು) ಬಾವಿಯ ಸಮೀಪ ತೊಳೆಯುತ್ತಿದ್ದರು. ಈ ಸಂದರ್ಭದಲ್ಲಿ ವಾಹನವು ರೋಲ್ ಆಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿತು. ವಾಹನವನ್ನು ಹಿಡಿದು ನಿಲ್ಲಿಸಲು ಹೋಗಿ, ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.​ರಾಜೇಶ್ ಅವರು ಪತ್ನಿ ಮತ್ತು ಇಬ್ಬರು ಪುಟ್ಟ ಪುತ್ರಿಯರನ್ನು ಅಗಲಿದ್ದಾರೆ. ಈ ಅಕಾಲಿಕ ಸಾವಿಗೆ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...