ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚಿ-ಕೈಯ್ಯೂರ್ ಸಂಪರ್ಕಿಸುವ ರಸ್ತೆಯ ಎರಡು ಬದಿಗಳಲ್ಲಿ ಕಲೆಗಿಡಗಳಿಂದ ತುಂಬಿದ್ದು ಇದರಿಂದ ವಾಹನ ಸವಾರರಿಗೆ ಹಾಗೂ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಶಾಲೆ ಮತ್ತು ಮದ್ರಸಾ ಹೋಗುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ.

ಆದ್ದರಿಂದ ಈ ಬಗ್ಗೆ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಪಿಐ ಮಂಚಿ ಗ್ರಾಮ ಸಮಿತಿ ಅದ್ಯಕ್ಷ ಜಬ್ಬಾರ್ ಮಂಚಿ ಮತ್ತು ಕಾರ್ಯದರ್ಶಿ ಡಿಎನ್ ಫಾರೂಕ್ ಮಂಚಿ ಹಾಗು ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.



