
ಮಂಗಳೂರು ಕುಂಜತ್ತಬೈಲ್ನ “ರಂಗ ಸ್ವರೂಪ” ಸಂಘವು ಕಳೆದ 20 ವರ್ಷಗಳಿಂದ ಹಲವಾರು ಶೈಕ್ಷಣಿಕ, ಸಾಮಾಜಿಕ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುತ್ತದೆ. ಪ್ರಸ್ತುತ ಪರಿಸರ ಕಾಳಜಿಯೊಂದಿಗೆ, ಸಾಮಾಜಿಕ ಸೇವೆ, ಶೈಕ್ಷಣಿಕ ಕ್ಷೇತ್ರ, ವೈದ್ಯಕೀಯ ಹಾಗೂ ಸಾಂಸ್ಕೃತಿಕ ರಂಗ, ಧಾರ್ಮಿಕ ಕ್ಷೇತ್ರ, ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುತ್ತದೆ.

ಪ್ರತೀ ವರ್ಷ ಸಾಮಾಜದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಅವರಿಗೆ “ರಂಗಸ್ವರೂಪ” ಪ್ರಶಸ್ತಿಯನ್ನು ನೀಡಿ ಸಾಧಕರನ್ನು ಪ್ರೋತ್ಸಾಹಿಸುತ್ತಾ ಬಂದಿರುತ್ತದೆ. ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲಿ ಮಾಡಿದ ಸೇವೆಯನ್ನು ಪರಿಗಣಿಸಿ, 2025-26ನೇ ಸಾಲಿನ ಜಿಲ್ಲಾರಾಜ್ಯೋತ್ಸವ ಪಶಸ್ತಿ ದೊರಕಿದೆ.



