ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಶಾಸಕ ಮಂಜುನಾಥ ಭಂಡಾರಿ ಮನವಿ!

Date:

ಮಂಗಳೂರು: ರೈಲುಗಳ ಸಂಖ್ಯೆ ಹೆಚ್ಚಾದರೂ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಿದರೂ ರೈಲ್ವೇ ಪೊಲೀಸ್ ಮಾತ್ರ ತುಂಬಾ ಹಳೆಯ ವ್ಯವಸ್ಥೆಯನ್ನೇ ಹೊಂದಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಬಳಿ ಠಾಣೆಯನ್ನು ಹೊಂದಿರುವ ಮಂಗಳೂರು ರೈಲ್ವೇ ಪೊಲೀಸ್ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಕೂಡಲೇ ಸಿಬ್ಬಂದಿಯ ನೇಮಕಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ.


ಮಂಗಳೂರು ರೈಲ್ವೇ ಪೊಲೀಸ್ ತಲಪಾಡಿ, ತೊಕ್ಕೊಟ್ಟು ಜಂಕ್ಷನ್, ತೋಕೂರು, ಬಂಟ್ವಾಳದಿಂದ ಸುಬ್ರಹ್ಮಣ್ಯದವರೆಗೆ 129 ಕಿ.ಮೀಗೂ ಅಧಿಕ ವ್ಯಾಪ್ತಿಯಲ್ಲಿ 18 ರೈಲು ನಿಲ್ದಾಣಗಳ ವ್ಯಾಪ್ತಿಯನ್ನು ಹೊಂದಿದೆ. ದಿನಕ್ಕೆ ಹತ್ತಾರು ರೈಲುಗಳಲ್ಲಿ ತಪಾಸಣೆ ನಡೆಸಬೇಕಿದೆ.
ಕನಿಷ್ಠ 30 ಮಂದಿ ಇರಬೇಕಾದ ಠಾಣೆಯಲ್ಲಿ ತಲಾ ಓರ್ವರು ಇನ್ಸ್‌ಪೆಕ್ಟರ್, ಪಿಎಸ್‌ಐ, ಎಎಸ್‌ಐ, ಮೂವರು ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು 9 ಮಂದಿ ಕಾನ್‌ ಸ್ಟೆಬಲ್‌ಗಳು ಸೇರಿದಂತೆ ಒಟ್ಟು 18 ಮಂದಿ ಪೊಲೀಸರು ಇದ್ದು ಇದರಲ್ಲಿ ನಾಲ್ವರು ಮಹಿಳಾ ಪಿಸಿಗಳು, ವಾಸ್ತವವಾಗಿ ಮಂಗಳೂರಿನಲ್ಲಿ ಅಧಿಕಾರಿ, ಸಿಬಂದಿ ಸೇರಿ 14 ಮಂದಿ ಮಾತ್ರ ಇದ್ದಾರೆ.
ಕೆಲಸದ ಒತ್ತಡದಿಂದಾಗಿ ಇರುವ ಸಿಬ್ಬಂದಿಗಳಿಗೆ ನಿರಂತರ ಕರ್ತವ್ಯದಿಂದಾಗಿ ವಿಶ್ರಾಂತಿ ಇಲ್ಲದಂತಾಗಿದೆ. ಅಗತ್ಯ ಬಿದ್ದಾಗ ರಜೆ ಮಾಡುವುದಕ್ಕೂ ಸಾಧ್ಯವಾಗುತ್ತಿಲ್ಲ. ಅತ್ತ ರೈಲ್ವೇ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುವುದು. ಇತ್ತ ಸಿಬಂದಿಯ ರಜೆ, ವಿಶ್ರಾಂತಿ ಮೊದಲಾದ ಅಗತ್ಯ ಬೇಡಿಕೆ ಈಡೇರಿಸುವ ಅಡಕತ್ತರಿಯಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ಮಂಗಳೂರಿನಲ್ಲಿ 1992ರಲ್ಲಿ ರೈಲ್ವೇ ಪೊಲೀಸ್ ಠಾಣೆ ಆರಂಭಗೊಂಡರೂ ಮೇಲ್ದರ್ಜೆಗೇರಿಲ್ಲ ಮುಖ್ಯವಾಗಿ ಸಿಬಂದಿ ಕೊರತೆ ಎದುರಿಸುತ್ತಿದ್ದು ಉಡುಪಿ ಕೊಂಕಣ ರೈಲ್ವೇ ಮಾರ್ಗದಲ್ಲಿ ರೈಲ್ವೇ ಪೊಲೀಸ್ ಇಲ್ಲದಿರುವುದರಿಂದ ಅಲ್ಲಿಯೂ ಮಂಗಳೂರಿನ ಪೊಲೀಸರೇ ನಿಗಾ ವಹಿಸಬೇಕಿದೆ.
ಆದ್ದರಿಂದ ಮಂಗಳೂರಿನ ರೈಲ್ವೇ ಪೊಲೀಸ್ (ಜಿಆರ್‌ಪಿ) ಠಾಣೆಯಲ್ಲಿ ಪೋಲಿಸ್ ಸಿಬ್ಬಂದಿಗಳ ಕೊರತೆಯನ್ನು ನೀಗಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಗೃಹ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಪತ್ರ ಮೂಲಕ ಭಂಡಾರಿ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...