ದ.ಕ ಜಿಲ್ಲೆಯನ್ನು ದಿವಾಳಿ ಮಾಡಿದ ಕಾಂಗ್ರೆಸ್ ಸರ್ಕಾರ: ನ್ಯಾಯವಾದಿ ಅಸ್ಗರ್

Date:

vltvkannada.com:ಕೆಂಪು ಕಲ್ಲು ಮತ್ತು ಮರಳಿನ ಕೊರತೆಯಿಂದ ಜನತೆ ಸಂಕಷ್ಟದಲ್ಲಿದ್ದಾರೆ

ರಾಜ್ಯ ಸರ್ಕಾರದ ಕೆಂಪು ಕಲ್ಲು ಮತ್ತು ಮರಳಿಗೆ ಸಂಬಂಧಿಸಿದ ಹೊಸ ನಿಯಮಗಳಿಂದ ಊರಿನ ಜನತೆ ಹಾಗೂ ಕಾರ್ಮಿಕರು ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ.

ಕೆಂಪು ಕಲ್ಲು, ಮರಳು ಇಲ್ಲದ ಕಾರಣ ಮನೆ ಕಟ್ಟುವ ಜನರಿಗೆ, ರಸ್ತೆ ನಿರ್ಮಾಣದ ಕೆಲಸಗಾರರಿಗೆ, ಲಾರೀ ಚಾಲಕರಿಗೆ ಮತ್ತು ಗಣಿಗಾರಿಕೆಯಲ್ಲಿ ದುಡಿಯುವ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗಿದೆ.

ಹೆಚ್ಚು ಖರ್ಚು, ಕಡಿಮೆ ಲಭ್ಯತೆ ಮತ್ತು ಲೈಸೆನ್ಸ್ ಸಮಸ್ಯೆಗಳ ನಡುವೆಲ್ಲಾ, ಸರಳ ಮನೆಯ ಕನಸು ನೋಡುತ್ತಿರುವ ಅವರ ಕುಟುಂಬಗಳು ದಿನದ ಊಟಕ್ಕೂ ಕಷ್ಟಪಡುವ ಪರಿಸ್ಥಿತಿ ಎದುರಿಸುತ್ತಿವೆ. ಮನೆ náಬಾಡಿಗೆಯ ಪಾವತಿ, ಮಕ್ಕಳ ಶಾಲಾ ಶುಲ್ಕ, ವೈದ್ಯಕೀಯ ಖರ್ಚುಗಳು ಎಲ್ಲವೂ ಪಾವತಿಸಲು ಸಾಧ್ಯವಾಗದೆ ಹಲವರು ಸಾಲದ ಚಕ್ರದಲ್ಲಿ ಸಿಲುಕುತ್ತಿದ್ದಾರೆ.ಮಿಡಲ್ ಕ್ಲಾಸ್ ಜನತೆ ವಿಪರೀತ ಹಿಂಸೆಗೆ ಒಳಗಾಗುತ್ತಿದ್ದಾರೆ.

ಈ ನಿಯಮಗಳಿಂದಾಗಿ ಗ್ರಾಮೀಣ ಪ್ರದೇಶದ ಸಾವಿರಾರು ಕುಟುಂಬಗಳು ಆರ್ಥಿಕವಾಗಿ ದುರ್ಬಲಗೊಂಡಿದ್ದು, ದಿನಗೂಲಿ ಕಾರ್ಮಿಕರು ನಿರುದ್ಯೋಗಿಗಳಾಗಿದ್ದಾರೆ.

ಈ ಎಲ್ಲಾ ಸಮಸ್ಯೆಗಳ ನಡುವೆಯೂ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದು ಜನರ ನೋವನ್ನು ಮತ್ತಷ್ಟು ಹೆಚ್ಚಿಸಿದೆ.

ಮಹಮ್ಮದ್ ಅಸ್ಗರ್, ನ್ಯಾಯವಾದಿ
ಉಪಾಧ್ಯಕ್ಷರು – ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...