ವಿಟ್ಲ: ಮಸೀದಿಯಲ್ಲಿ ಗೋಹತ್ಯೆ ಕಾನೂನು ಜಾಗೃತಿ– ಪೊಲೀಸ್ ಕ್ರಮ ಸರಿಯಲ್ಲ: ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಮನವಿ

Date:

ವಿಟ್ಲ: ಗೋಹತ್ಯೆ ತಡೆ ಕಾನೂನಿನ ಜಾಗೃತಿ ಕಾರ್ಯಕ್ರಮಕ್ಕಾಗಿ ಮಸೀದಿಯನ್ನು ಆಯ್ಕೆ ಮಾಡಿದ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಹಾಗೂ ಅಲ್ಪಸಂಖ್ಯಾತ ಮುಖಂಡ ಎಂ.ಎಸ್. ಮಹಮ್ಮದ್ ಅವರ ನೇತೃತ್ವದಲ್ಲಿ ನಿಯೋಗವೊಂದು ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ನಿಯೋಗದವರು ಪೊಲೀಸರೊಂದಿಗೆ ಸವಿವರವಾಗಿ ಚರ್ಚಿಸಿ, “ಕಾನೂನು ಬಾಹಿರ ಅಥವಾ ಅನೈತಿಕ ಚಟುವಟಿಕೆಗಳಲ್ಲಿ ತೊಡಗುವ ಯಾರ ಮೇಲಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ, ಆದರೆ ಒಂದು ಸಮುದಾಯವನ್ನು ಗುರಿಯಾಗಿಸಿ ಮಸೀದಿಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.“ಗೋಹತ್ಯೆ, ಮಾದಕ ವ್ಯಸನ, ಇತ್ಯಾದಿ ಕುರಿತು ಸಾರ್ವಜನಿಕ ಮಟ್ಟದಲ್ಲಿ ಪೊಲೀಸರು ಜಾಗೃತಿ ಮೂಡಿಸಿದರೆ ನಮಗೆ ಯಾವುದೇ ವಿರೋಧವಿಲ್ಲ. ಆದರೆ ಒಂದು ಸಮುದಾಯವನ್ನು ಗುರಿಯಾಗಿಸುವ ರೀತಿಯ ಕ್ರಮ ನ್ಯಾಯೋಚಿತವಲ್ಲ. ನಮ್ಮ ಉಲಮಾ ನೇತಾರರು ಪ್ರತಿ ಶುಕ್ರವಾರವೇ ಈ ಕುರಿತು ಸಮುದಾಯದೊಳಗೆ ಜಾಗೃತಿ ಮೂಡಿಸುತ್ತಿದ್ದಾರೆ,” ಎಂದು ನಿಯೋಗವು ತಿಳಿಸಿತು.

ಈ ಕುರಿತು ಪ್ರತಿಕ್ರಿಯಿಸಿದ ಠಾಣಾ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು, “ವಿಟ್ಲ ಠಾಣಾ ವ್ಯಾಪ್ತಿಯ ಮಸೀದಿಗಳಲ್ಲಿ ಪೊಲೀಸರು ಬೇಟಿ ನೀಡುವುದಿಲ್ಲ” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಟ್ಲ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕರೀಂ ಕುದ್ದುಪದವು, ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಶಮೀರ್ ಪಳಿಕೆ,ವಿಟ್ಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕೆಎಂ ಹಂಝ, ಕಾಂಗ್ರೆಸ್ ಮುಖಂಡ ರಶೀದ್ ವಿಟ್ಲ, ಸಿರಾಜ್ ಮಣಿಲ, ಕನ್ಯಾನ ಗ್ರಾ.ಪಂಚಾಯತ್ ಸದಸ್ಯ ಅಬ್ದುಲ್ ಮಜೀದ್ ಕನ್ಯಾನ, ಪುತ್ತೂರು ಗ್ಯಾರಂಟಿ ಯೋಜನೆಯ ಸದಸ್ಯ ಅಬ್ಬು ಹುಸೈನ್ ನವಗ್ರಾಮ, ಸಾಮಾಜಿಕ ಮುಖಂಡ ಹಸೈನಾರ್ ತಾಳಿತ್ತನೂಜಿ, ಅಶ್ರಫ್ ಮಣಿಲ, ರಹೀಂ ಪಳಿಕೆ ಹಾಗೂ ಗ್ರಾ.ಪಂಚಾಯತ್ ಮಾಜಿ ಸದಸ್ಯ ಶೇಕ್ ಅಲಿ ಸೇರಾಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...