ನ.15: ಪಣಪಿಲದಲ್ಲಿ 16 ನೇ ವರುಷದ ‘ಜಯ-ವಿಜಯ’ ಜೋಡುಕರೆ ಕಂಬಳ

Date:

ಮೂಡುಬಿದಿರೆ : ಇಲ್ಲಿನ ಪಣಪಿಲದಲ್ಲಿ ಜೋಡುಕರೆ ಕಂಬಳ ಸಮಿತಿಯ ವತಿಯಿಂದ 16ನೇ ವರುಷದ ಹೊನಲು ಬೆಳಕಿನ ‘ಜಯ-ವಿಜಯ’ ಜೋಡುಕರೆ ಕಂಬಳವು ನ.15 ರಂದು ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಂದೊಟ್ಟು ಪಣಪಿಲ ಯುವರಾಜ್ ಜೈನ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮಿತಿಯ ಕಾಯ೯ಧ್ಯಕ್ಷ ಕೆಲ್ಲಪುತ್ತಿಗೆ ಗುತ್ತು ಸುಭಾಶ್ಚಂದ್ರ ಚೌಟ ಅವರು ಈ ಬಗ್ಗೆ ಮಾಹಿತಿ ನೀಡಿ ಮಾತನಾಡಿ ಪಣಪಿಲ ಕಂಬಳವು ಕಳೆದ 15 ವರುಷಗಳಿಂದಲೂ ಉತ್ತಮವಾಗಿ ನಡೆದುಕೊಂಡು ಬಂದಿದೆ. ಇದೀಗ 16ನೇ ವರುಷದ ಕಂಬಳಕ್ಕೆ ಸಿದ್ಧತೆ ನಡೆಯುತ್ತಿದ್ದು, ಕಳೆದ ಒಂದು ತಿಂಗಳಿಂದ ಕಂಬಳ ಕರೆ ಮತ್ತು ಆ ಪರಿಸರದಲ್ಲಿ ಕಂಬಳ ಸಮಿತಿ ಸದಸ್ಯರು ಮತ್ತು ಊರ ಸ್ವಯಂ ಸೇವಕರು ಕಂಬಳದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ, ಅಚ್ಚುಕಟ್ಟಿನ ವ್ಯವಸ್ಥೆಗಳು ನಡೆಯುತ್ತಿದೆ.ಕಂಬಳಕ್ಕೆ ಚಿತ್ರ ನಿರ್ಮಾಪಕ, ಉದ್ಯಮಿ ಲಾಂಚುಲಾಲ್ ಹಾಗೂ ದಾನಿಗಳ ನೆರವಿನಿಂದ ಪ್ರೋತ್ಸಾಹದೊಂದಿಗೆ ಕಂಬಳ ಯಶಸ್ವಿಯಾಗಿ ನಡೆಯಲಿದೆ ಎಂದರು.

ಸುಮಾರು 160 ಜತೆ ಕೋಣಗಳು ಈ ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹಳ್ಳಿಯ ಕೂಟ ಎಂಬ ಕಂಬಳ ಇಂದಿಗೆ ಉಳಿದುಕೊಂಡಿದೆ ಎಂದರೆ ಅದು ಪಣಪಿಲ ಕಂಬಳ ಎಂದು ಹೇಳಿದರು.ಉಪಾಧ್ಯಕ್ಷ ಮುನಿರಾಜ್ ಹೆಗ್ಡೆಯವರು ಕಂಬಳ ಪ್ರೋತ್ಸಾಹಕರ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಅಶ್ವಥ್ ಕೆ.ಪಣಪಿಲ ಅವರು ಸ್ವಾಗತಿಸಿ ಪಣಪಿಲ ಕಂಬಳದ ಕುರಿತು ಮತ್ತು ಅಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ...

ಬಿಹಾರದಲ್ಲಿ ಬಿಜೆಪಿ ಜಯಭೇರಿ: ಮೂಡುಬಿದಿರೆ ಮಂಡಲದಿಂದ ವಿಜಯೋತ್ಸವ

ಮೂಡುಬಿದಿರೆ : ಬಿಹಾರದಲ್ಲಿ ಬಿಜೆಪಿಯು ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ...

ನ.16: ಪವರ್ ಫ್ರೆಂಡ್ಸ್ ನಿಂದ ಅಂಚೆ ಜನ ಸಂಪಕ೯ ಅಭಿಯಾನ, ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ...