ಕಂಬಳದಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ ರದ್ದು

Date:

ಮೂಡುಬಿದಿರೆ: ಅವಿಭಜಿತ ಜಿಲ್ಲೆಗಳಲ್ಲಿ ನಡೆಯುವ ಕಂಬಳಗಳಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ಗಳನ್ನು ರದ್ದುಗೊಳಿಸಲಾಗಿದೆ.

ಇದರಿಂದಾಗಿ ಕಳೆದ 15 ವರ್ಷಗಳಿಂದ ಯಶಸ್ವಿಯಾಗಿ ಆಯೋಜನೆಗೊಳ್ಳುತ್ತಿದ್ದ ಪಣಪಿಲ ಕಂಬಳದಲ್ಲಿ ಈ ಬಾರಿ ‘ಸಬ್ ಜೂನಿಯರ್’ ವಿಭಾಗದ ಸ್ಪರ್ಧೆ ಮೊಟಕುಗೊಂಡಿದೆ. ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಬಂದಿರುವ ಆದೇಶದ ಮೇರೆಗೆ ಕಾನೂನಿನ ತೊಡಕಿನ ಕಾರಣದಿಂದ ಈ ವಿಭಾಗವನ್ನು ರದ್ದುಗೊಳಿಸಲಾಗಿದೆ ಎಂದು ಪಣಪಿಲ ಕಂಬಳ ಸಮಿತಿ ತಿಳಿಸಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಕೆ. ಅಶ್ವಥ್ ಪಣಪಿಲ ಮಾಹಿತಿ ನೀಡಿದ್ದು, ಈ ವರ್ಷ ನೇಗಿಲು ಕಿರಿಯ ಸೇರ್ಪಡೆಗೊಳಿಸಲಾಗಿದೆ. ಉಳಿದಂತೆ ಹಗ್ಗ ಕಿರಿಯ, ಮತ್ತು ವಿಶೇಷವಾಗಿ ನೇಗಿಲು ಹಿರಿಯ ವಿಭಾಗಗಳ ಸ್ಪರ್ಧೆಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾನೂನು ಪಾಲನೆಯ ದೃಷ್ಟಿಯಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಂಬಳಾಭಿಮಾನಿಗಳು ಹಾಗೂ ಕೋಣಗಳ ಯಜಮಾನರು ಸಮಿತಿಯ ನಿರ್ಧಾರಕ್ಕೆ ಸಹಕರಿಸಬೇಕೆಂದು ಸಮಿತಿ ವಿನಂತಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...