ಕಂಬಳದಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ ರದ್ದು

Date:

ಮೂಡುಬಿದಿರೆ: ಅವಿಭಜಿತ ಜಿಲ್ಲೆಗಳಲ್ಲಿ ನಡೆಯುವ ಕಂಬಳಗಳಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ಗಳನ್ನು ರದ್ದುಗೊಳಿಸಲಾಗಿದೆ.

ಇದರಿಂದಾಗಿ ಕಳೆದ 15 ವರ್ಷಗಳಿಂದ ಯಶಸ್ವಿಯಾಗಿ ಆಯೋಜನೆಗೊಳ್ಳುತ್ತಿದ್ದ ಪಣಪಿಲ ಕಂಬಳದಲ್ಲಿ ಈ ಬಾರಿ ‘ಸಬ್ ಜೂನಿಯರ್’ ವಿಭಾಗದ ಸ್ಪರ್ಧೆ ಮೊಟಕುಗೊಂಡಿದೆ. ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಬಂದಿರುವ ಆದೇಶದ ಮೇರೆಗೆ ಕಾನೂನಿನ ತೊಡಕಿನ ಕಾರಣದಿಂದ ಈ ವಿಭಾಗವನ್ನು ರದ್ದುಗೊಳಿಸಲಾಗಿದೆ ಎಂದು ಪಣಪಿಲ ಕಂಬಳ ಸಮಿತಿ ತಿಳಿಸಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಕೆ. ಅಶ್ವಥ್ ಪಣಪಿಲ ಮಾಹಿತಿ ನೀಡಿದ್ದು, ಈ ವರ್ಷ ನೇಗಿಲು ಕಿರಿಯ ಸೇರ್ಪಡೆಗೊಳಿಸಲಾಗಿದೆ. ಉಳಿದಂತೆ ಹಗ್ಗ ಕಿರಿಯ, ಮತ್ತು ವಿಶೇಷವಾಗಿ ನೇಗಿಲು ಹಿರಿಯ ವಿಭಾಗಗಳ ಸ್ಪರ್ಧೆಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾನೂನು ಪಾಲನೆಯ ದೃಷ್ಟಿಯಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಂಬಳಾಭಿಮಾನಿಗಳು ಹಾಗೂ ಕೋಣಗಳ ಯಜಮಾನರು ಸಮಿತಿಯ ನಿರ್ಧಾರಕ್ಕೆ ಸಹಕರಿಸಬೇಕೆಂದು ಸಮಿತಿ ವಿನಂತಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...