ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ಸು ಸೇವೆಗೆ ಎಸ್‌ಡಿಪಿಐ ಗ್ರಾಮ ಸಮಿತಿ ಅದ್ಯಕ್ಷ ಬಶೀರ್ ಕೊಳ್ನಾಡ್ ಆಗ್ರಹ

Date:

ವಿಟ್ಲ: ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ ಸೌಲಭ್ಯಗಳ ಕೊರತೆಯಿಂದ ಶಾಲೆ ಮತ್ತು ಕಾಲೇಜು ಮಕ್ಕಳಿಗೆ ತೀವ್ರ ಅನಾನುಕೂಲ ಉಂಟಾಗಿದೆ ಎಂದು ಎಸ್‌ಡಿಪಿಐ ಕೊಳ್ನಾಡು ಗ್ರಾಮ ಸಮಿತಿ ಅದ್ಯಕ್ಷ ಬಶೀರ್ ಕೊಳ್ನಾಡ್ ತಿಳಿಸಿದ್ದಾರೆ.

ಪ್ರತಿ ದಿನ ನೂರಾರು ವಿದ್ಯಾರ್ಥಿಗಳು ಈ ಮಾರ್ಗದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ತೆರಳುತ್ತಿದ್ದು, ಸರಕಾರಿ ಬಸ್ಸುಗಳ ಅಭಾವದಿಂದ ಅವರು ಸಮಯಕ್ಕೆ ತಲುಪುವಲ್ಲಿ ದೊಡ್ಡ ತೊಂದರೆ ಅನುಭವಿಸುತ್ತಿದ್ದಾರೆ. ಖಾಸಗಿ ಸಾರಿಗೆ ವಾಹನಗಳು ಎಲ್ಲರಿಗೂ ಲಭ್ಯವಿಲ್ಲದ ಕಾರಣ ಗ್ರಾಮೀಣ ಜನ ಜೀವನ ಅಸ್ತವ್ಯಸ್ಥವಾಗಿದೆ.

ಈ ಪರಿಸ್ಥಿತಿಯನ್ನು ಮನಗಂಡು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ತಕ್ಷಣವೇ ಸರಕಾರಿ ಬಸ್ಸು ಸೇವೆ ಆರಂಭಿಸುವಂತೆ ಬಶೀರ್ ಕೊಳ್ನಾಡ್ ಅವರು ಸಾರಿಗೆ ಇಲಾಖೆಯ ಗಮನ ಸೆಳೆದಿದ್ದಾರೆ.

“ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸಾರಿಗೆ ಮೂಲಭೂತ ಅಗತ್ಯವಾಗಿದ್ದು, ಸರ್ಕಾರಿ ಬಸ್ಸುಗಳ ಕೊರತೆಯಿಂದ ಗ್ರಾಮಗಳ ಅಭಿವೃದ್ಧಿ ತಡೆಯಲ್ಪಡುತ್ತಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಸೇವೆಯು ಈ ಭಾಗದ ಮಹಿಳೆಯರಿಗೆ ಹಗಲು ಕನಸಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ತಕ್ಷಣ ಗಂಭೀರವಾಗಿ ಪರಿಗಣಿಸಬೇಕು” ಎಂದು ಎಸ್‌ಡಿಪಿಐ ಕೊಳ್ನಾಡು ಗ್ರಾಮ ಸಮಿತಿ ಅದ್ಯಕ್ಷ ರಾದ ಬಶೀರ್ ಕೊಳ್ನಾಡು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...