ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ಸು ಸೇವೆಗೆ ಎಸ್‌ಡಿಪಿಐ ಗ್ರಾಮ ಸಮಿತಿ ಅದ್ಯಕ್ಷ ಬಶೀರ್ ಕೊಳ್ನಾಡ್ ಆಗ್ರಹ

Date:

ವಿಟ್ಲ: ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ ಸೌಲಭ್ಯಗಳ ಕೊರತೆಯಿಂದ ಶಾಲೆ ಮತ್ತು ಕಾಲೇಜು ಮಕ್ಕಳಿಗೆ ತೀವ್ರ ಅನಾನುಕೂಲ ಉಂಟಾಗಿದೆ ಎಂದು ಎಸ್‌ಡಿಪಿಐ ಕೊಳ್ನಾಡು ಗ್ರಾಮ ಸಮಿತಿ ಅದ್ಯಕ್ಷ ಬಶೀರ್ ಕೊಳ್ನಾಡ್ ತಿಳಿಸಿದ್ದಾರೆ.

ಪ್ರತಿ ದಿನ ನೂರಾರು ವಿದ್ಯಾರ್ಥಿಗಳು ಈ ಮಾರ್ಗದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ತೆರಳುತ್ತಿದ್ದು, ಸರಕಾರಿ ಬಸ್ಸುಗಳ ಅಭಾವದಿಂದ ಅವರು ಸಮಯಕ್ಕೆ ತಲುಪುವಲ್ಲಿ ದೊಡ್ಡ ತೊಂದರೆ ಅನುಭವಿಸುತ್ತಿದ್ದಾರೆ. ಖಾಸಗಿ ಸಾರಿಗೆ ವಾಹನಗಳು ಎಲ್ಲರಿಗೂ ಲಭ್ಯವಿಲ್ಲದ ಕಾರಣ ಗ್ರಾಮೀಣ ಜನ ಜೀವನ ಅಸ್ತವ್ಯಸ್ಥವಾಗಿದೆ.

ಈ ಪರಿಸ್ಥಿತಿಯನ್ನು ಮನಗಂಡು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ತಕ್ಷಣವೇ ಸರಕಾರಿ ಬಸ್ಸು ಸೇವೆ ಆರಂಭಿಸುವಂತೆ ಬಶೀರ್ ಕೊಳ್ನಾಡ್ ಅವರು ಸಾರಿಗೆ ಇಲಾಖೆಯ ಗಮನ ಸೆಳೆದಿದ್ದಾರೆ.

“ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸಾರಿಗೆ ಮೂಲಭೂತ ಅಗತ್ಯವಾಗಿದ್ದು, ಸರ್ಕಾರಿ ಬಸ್ಸುಗಳ ಕೊರತೆಯಿಂದ ಗ್ರಾಮಗಳ ಅಭಿವೃದ್ಧಿ ತಡೆಯಲ್ಪಡುತ್ತಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಸೇವೆಯು ಈ ಭಾಗದ ಮಹಿಳೆಯರಿಗೆ ಹಗಲು ಕನಸಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ತಕ್ಷಣ ಗಂಭೀರವಾಗಿ ಪರಿಗಣಿಸಬೇಕು” ಎಂದು ಎಸ್‌ಡಿಪಿಐ ಕೊಳ್ನಾಡು ಗ್ರಾಮ ಸಮಿತಿ ಅದ್ಯಕ್ಷ ರಾದ ಬಶೀರ್ ಕೊಳ್ನಾಡು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...