ಮದೀನಾ ಉಮ್ರಾ ಯಾತ್ರಿಕರಿದ್ದ ಬಸ್ ಅಪಘಾತದಲ್ಲಿ ಮೂರು ತಲೆಮಾರಿನ ಒಂದೇ ಕುಟುಂಬದ 18 ಮಂದಿ ಮೃತ್ಯು!

Date:

ಶನಿವಾರ ಹೈದರಾಬಾದ್ ಗೆ ಮರಳಲಿದ್ದ ಕುಟುಂಬ

ಹೈದರಾಬಾದ್: ಸೌದಿ ಅರೇಬಿಯದ ಮದೀನಾ ಬಳಿ ನಡೆದ ಬಸ್ ಅಪಘಾತದಲ್ಲಿ ಒಂಭತ್ತು ಮಕ್ಕಳು ಸೇರಿದಂತೆ ಮೂರು ತಲೆಮಾರಿನ ಒಂದೇ ಕುಟುಂಬದ 18 ಮಂದಿ ಭಾರತೀಯ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಹೈದರಾಬಾದ್ ಮೂಲದ ಈ ಕುಟುಂಬ ಶನಿವಾರ ತವರಿಗೆ ಮರಳಬೇಕಿತ್ತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಹಮ್ಮದ್ ಆಸಿಫ್, “ನನ್ನ ನಾದಿನಿ, ನನ್ನ ಮೈದುನ, ಅವರ ಮಕ್ಕಳು, ಮೂವರು ಪುತ್ರಿಯರು ಹಾಗೂ ಅವರ ಮಕ್ಕಳು ಉಮ್ರಾಗಾಗಿ ಮದೀನಾಕ್ಕೆ ತೆರಳಿದ್ದರು. ಎಂಟು ದಿನಗಳ ಹಿಂದೆ ಅವರು ಮದೀನಾಕ್ಕೆ ತೆರಳಿದ್ದರು ಹಾಗೂ ಉಮ್ರಾ ವಿಧಿ ವಿಧಾನ ನಂತರ, ಮದೀನಾಕ್ಕೆ ಹಿಂದಿರುಗುತ್ತಿದ್ದರು. ಮುಂಜಾನೆ ಸುಮಾರು 1.30 ಗಂಟೆಗೆ ಬಸ್ ಅಪಘಾತ ಸಂಭವಿಸಿದ್ದು, ಬಸ್ ಗೆ ಬೆಂಕಿ ಹೊತ್ತುಕೊಂಡಿದೆ” ಎಂದು ತಿಳಿಸಿದ್ದಾರೆ.

“ಅಪಘಾತ ಸಂಭವಿಸುವುದಕ್ಕೂ ಮುನ್ನ ಅವರು ತಮ್ಮ ಸಂಬಂಧಿಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು. ಈ ಅಪಘಾತದಲ್ಲಿ ಒಂದೇ ಕುಟುಂಬದ ಒಂಭತ್ತು ಮಂದಿ ವಯಸ್ಕರು ಹಾಗೂ ಒಂಭತ್ತು ಮಕ್ಕಳು ಮೃತಪಟ್ಟಿದ್ದಾರೆ. ಇದೊಂದು ಭಯಾನಕ ದುರಂತ”, ಎಂದು ಅವರು ಭಾವುಕರಾದರು.

ಅಪಘಾತದಲ್ಲಿ ಮೃತಪಟ್ಟ ತಮ್ಮ ಸಂಬಂಧಿಕರ ಪೈಕಿ, ನಸೀರುದ್ದೀನ್ (70), ಅವರ ಪತ್ನಿ ಅಖ್ತರ್ ಬೇಗಂ (62), ಪುತ್ರ ಸಲೌದ್ದೀನ್ (42), ಪುತ್ರಿಯರಾದ ಅಮೀನಾ (44), ರಿಝ್ವಾನಾ (38) ಹಾಗೂ ಶಬಾನಾ (40) ಮತ್ತು ಅವರ ಮಕ್ಕಳು ಎಂದು ಮುಹಮ್ಮದ್ ಆಸಿಫ್ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...