ಅಪಘಾತದಲ್ಲಿ ಮರಣ ಹೊಂದಿದ ಮೂವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಸಹಾಯ ನೀಡಲು ಸರಕಾರಕ್ಕೆ ಸ್ಪೀಕರ್ ಮೂಲಕ ದೀವಾನ್-ಇ-ಖಾಝಿ ಸುನ್ನಿ ಸಂಯುಕ್ತ ಜಮಾತ್ ಕರ್ನಾಟಕ ಮನವಿ

Date:

ಮಂಗಳೂರು: ಮೊಂಟೆಪದವು ನಿವಾಸಿಗಳಾಗಿದ್ದ ಮರಿಕ್ಕಳ ಜಮಾಅತಿಗೆ ಒಳಪಟ್ಟ ಸುನ್ನೀ ಕಾರ್ಯಕರ್ತರಾದ ಇಬ್ರಾಹಿಮ್ ಬಟ್ಯಡ್ಕ . ಅಟೋ ಚಾಲಕ ಮನ್ಸೂರ್ ಮರಿಕ್ಕಳ ಅಬೂಬಕ್ಕರ್ ಮೊಂಟೆಪದವು ಅವರು ಇತ್ತೀಚೆಗೆ ಮಂಗಳೂರಿನ ಪಣಂಬೂರಿನಲ್ಲಿ ನಡೆದ ಅಪಘಾತದಲ್ಲಿ ಮರಣ ಹೊಂದಿದ್ದು ಆ ಕುಟುಂಬದ ಮನೆಗೆ ಸುನ್ನೀ ಸಂಯುಕ್ತ ಜಮಾಅತ್ ಕರ್ನಾಟಕ ಇದರ ನಾಯಕರು ಭೇಟಿ ನೀಡಿ ಸಾಂತ್ವನ ಹೇಳುವ ಮೂಲಕ ವಿಷೇಶ ಪ್ರಾರ್ಥನೆ ನಡೆಸಿದ್ದಾರೆ.

ಅದಾದ ಬಳಿಕ ದಿನಾಂಕ 18.11.2025 ಮಂಗಳವಾರ ಬೆಳಿಗ್ಗೆ ದೀವಾನ್ -ಇ -ಖಾಝಿ ಸುನ್ನಿ ಸಂಯುಕ್ತ ಜಮಾಅತ್ ಕರ್ನಾಟಕ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಹನೀಫ್ ಹಾಜಿ ಉಳ್ಳಾಲ ಪ್ರಧಾನ ಕಾರ್ಯದರ್ಶಿ ಆಶ್ರಫ್ ಸಅದಿ ಮಲ್ಲೂರು ನೇತೃತ್ವದಲ್ಲಿ ಆ ಕುಟುಂಬಕ್ಕೆ ಗರಿಷ್ಠ ಸಹಾಯವನ್ನು ಸರಕಾರ ನೀಡಬೇಕು ಎಂದು ಕರ್ನಾಟಕ ವಿಧಾನ ಸಭಾದ್ಯಕ್ಷರಾದ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಸಿದ್ದೀಖ್ ಸಖಾಫಿ ಮೂಳೂರು,ಬದ್ರುದ್ದೀನ್ ಅಝ್ಹರಿ ಕೈಕಂಬ, ಹೈದರ್ ಅಲಿ ಹಿಮಮಿ ಮಲಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹರೀಶ್ ಮಾಂಬಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಮಡಂತ್ಯಾರಿನ ಕಲಾಸಭಾಂಗಣದಲ್ಲಿ ಭಾನುವಾರ ಮಡಂತ್ಯಾರು ಜೇಸಿ ಆಯೋಜಿಸಿದ ಜೇಸಿ ವಲಯ 15ರ...

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...