ಮೂಡುಬಿದಿರೆಗೆ ಶೀಘ್ರದಲ್ಲೇ ತಾಲ್ಲೂಕು ಕಾನೂನು ಸೇವಾ ಸಮಿತಿ

Date:

ಮೂಡುಬಿದಿರೆ: ಈಗಾಗಲೇ ರಾಜ್ಯದಲ್ಲಿ 149 ತಾಲ್ಲೂಕು ಕಾನೂನು ಸೇವಾ ಸಮಿತಿ ಕೆಲಸ ಮಾಡುತ್ತಿವೆ. ಇಲ್ಲಿನ ವಕೀಲರ ಬೇಡಿಕೆಯಂತೆ ಮೂಡುಬಿದಿರೆಯಲ್ಲೂ ಶೀಘ್ರದಲ್ಲೇ ತಾಲ್ಲೂಕು ಕಾನೂನು ಸೇವಾ ಸಮಿತಿ ಅಸ್ತಿತ್ವಕ್ಕೆ ಬರಲಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಜೈಬುನ್ನೀಸ ಹೇಳಿದರು.

ಅವರು ಇಲ್ಲಿನ ಎಂಸಿಎಸ್ ಸೊಸೈಟಿಯಲ್ಲಿ ಮಂಗಳವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಂಭ್ರಮದ ಐದನೇ ದಿನದ ಕಾರ್ಯಕ್ರಮದಲ್ಲಿ ಸಹಕಾರ-ಉಚಿತ ಕಾನೂನು ಸೇವೆ ವಿಷಯದ ಕುರಿತು ಮಾತನಾಡಿದರು. ಗಾಳಿ, ನೀರು ತಾರತಮ್ಯ ಇಲ್ಲದೆ ಎಲ್ಲರಿಗು ಸಿಗುತ್ತಿದೆ. ಹಾಗೇನೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಪಡೆಯುವ ಹಕ್ಕಿದ್ದು ಅದರಲ್ಲಿ ತಾರತಮ್ಯ ಆಗಬಾರದು. ಕೋರ್ಟ್ ನಲ್ಲಿ ಬಗೆಹರಿಯದ ಪ್ರಕರಣಗಳು, ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನಗಳಲ್ಲಿ ಬಗೆಹರಿಸಲು ಪ್ರತಿ ಜಿಲ್ಲೆಯಲ್ಲಿ ಲೋಕ ಅದಾಲತ್‌ಗಳನ್ನು ನಡೆಸಲಾಗುತ್ತದೆ. ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ‍್ಯನಿರ್ವಹಿಸುತ್ತವೆ. ಈ ಸೇವೆಯು ಸಂಪೂರ್ಣ ಉಚಿತವಾಗಿದ್ದು ತ್ವರಿತಗತಿಯಲ್ಲಿ ನ್ಯಾಯ ಸಿಗುತ್ತದೆ. ಮೂಡುಬಿದಿರೆ ಜನತೆಗೂ ಇಂತಹ ಸೌಲಭ್ಯ ಸಿಗಲು ತಾಲ್ಲೂಕು ಕಾನೂನು ಸೇವಾ ಸಮಿತಿ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದರು. ಸಹಕಾರ ಸಂಘಗಳ ಪ್ರಕರಣಗಳನ್ನು ಕೂಡ ಲೋಕ ಅದಾಲತ್ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಅವರು ಹೇಳಿದರು.

ಶಾಸಕ ಉಮಾನಾಥ ಕೋಟ್ಯಾನ್, ತಹಶೀಲ್ದಾರ್ ಶ್ರೀಧರ್ ಮುಂದಲಮನಿ, ಭುವನಜ್ಯೋತಿ ಇನ್ಸಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಶಿರ್ತಾಡಿ ಇಲ್ಲಿನ ಪ್ರಾಂಶುಪಾಲ ಪ್ರದೀಪ ಎಮ್.ಡಿ, ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ನಿರ್ದೇಶಕರಾದ ಪ್ರೇಮಾ ಸಾಲ್ಯಾನ್, ಅನಿತಾ ಪಿ. ಶೆಟ್ಟಿ, ಅಶೋಕ್ ಕಾಮತ್ ಉಪಸ್ಥಿತರಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಯಿತು. ಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು. ಚೇತನಾ ಆರ್. ಹೆಗ್ಡೆ ಮತ್ತು ಗಣೇಶ್ ಕಾಮತ್ ಕಾಯ೯ಕ್ರಮ ನಿರೂಪಿಸಿದರು. ಬ್ಯಾಂಕ್ ಸಿಬಂದಿ ಸುದರ್ಶನ್ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...