ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ರಾಜ್ಯ ಮಟ್ಟದ 23ನೇ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾರ್ಷಿಕ ಅಥ್ಲೆಟಿಕ್ ಕ್ರೀಡಾಕೂಟ ಆರಂಭ

Date:

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನಗಳ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 23ನೇ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾರ್ಷಿಕ ಅಥ್ಲೆಟಿಕ್ ಕ್ರೀಡಾಕೂಟ 2025-26 ಸ್ವರಾಜ್ ಮೈದಾನದಲ್ಲಿ ಉದ್ಘಾಟನೆಗೊಂಡಿತು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ಕುಲಸಚಿವ ಡಾ ವಸಂತ ಶೆಟ್ಟಿ ಮಾತನಾಡಿ, ಸಶಕ್ತ ಭಾರತವನ್ನು ಸಶಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ನಿರ್ಮಾಣವಾಗಬೇಕೆಂದು ನಮ್ಮ ಕುಲಪತಿಗಳಾದ ಡಾ.ಭಗವಾನ್ ಬಿ.ಸಿಯವರ ಕನಸು. ಆ ನೆಲೆಯಲ್ಲಿ ಈ ಕ್ರೀಡಾಕೂಟವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ದೀಪನಕ್ಕೆ ನೀಡುವ ಪ್ರೋತ್ಸಾಹವನ್ನು ಸಾಕ್ಷೀಕರಿಸುತ್ತದೆ.

ಕರ್ನಾಟಕ ಕೌನ್ಸಿಲ್ ಫಾರ್ ಅಲೈಡ್ ಮತ್ತು ಹೆಲ್ತ್ಕೇರ್ ಪ್ರೊಫೆಶನ್ಸ್ನ ಅಧ್ಯಕ್ಷ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ. ಯು. ಟಿ. ಇಫ್ತಿಖಾರ್ ಅಲಿ ಕಾರ‍್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಉಮಾನಾಥ್ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಸಿಂಡಿಕೇಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಸೆನೆಟ್ ಸದಸ್ಯೆ ಪ್ರೊ.ವೈಶಾಲಿ ಶ್ರೀಜಿತ್, ಕ್ರೀಡಾಕೂಟದ ವೀಕ್ಷಕರಾದ ಡಾ.ಅನಿಲ್ ಜೋಸೆಫ್, ಡಾ.ಜಯಕುಮಾರ್, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು. ಜೇಷ್ಯಾ ಡಿಸೋಜ, ಉಷಾರಾಣಿ ಜಿ ಎಚ್, ವಿಶಾಲ್ ವಿ ಸಾಲ್ಯಾನ್, ಕ್ಯಾಥರಿನ್ ತೋಮಸ್, ಮಹೇಂದರ್ ಚೌಧರಿ ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಿದರು. ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ.ಸುಶೀಲ ಶೆಟ್ಟಿ ಸ್ವಾಗತಿಸಿದರು.

ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.ರಾಷ್ಟ್ರ ನಷಾ ಮುಕ್ತ ಭಾರತ ಅಭಿಯಾನಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಕ್ರಿಯ ಬೆಂಬಲ ನೀಡುತ್ತಿದೆ. ಈ ಹಿನ್ನಲೆಯಲ್ಲಿ ಈ ಕ್ರೀಡಾಕೂಟದ ಪಥಸಂಚಲನದಲ್ಲಿ ಆಳ್ವಾಸ್ ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ವಿಶೇಷ ಪ್ಲಕಾರ್ಡ್ಗಳು ಮತ್ತು ಬ್ಯಾನರ್‌ಗಳು ಹಿಡಿದು ನಷಾ ಮುಕ್ತ ಭಾರತ ಸಂದೇಶವನ್ನು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ತಲುಪಿಸಿದರು.

ಆಳ್ವಾಸ್ ಮುನ್ನಡೆ ಮೊದಲ ದಿನದ ಅಂತ್ಯಕ್ಕೆ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ಸ್ ಕಾಲೇಜಿನ ವಿದ್ಯಾರ್ಥಿಗಳು 14 ಪಾಯಿಂಟ್‌ಗಳೊAದಿಗೆ ಮುನ್ನಡೆ ಕಾಪಾಡಿಕೊಂಡರೆ, ಸೈಂಟ್ ಅಥೆನಾ ಕಾಲೇಜು 13 ಪಾಯಿಂಟ್‌ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಮೂರು ದಿನಗಳ ಕ್ರೀಡಾಕೂಟದಲ್ಲಿ ರಾಜ್ಯದ 127 ಕಾಲೇಜುಗಳಿಂದ 924 ಕ್ರೀಡಾಪಟುಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...