ವಾಲ್ಪಾಡಿಯಲ್ಲಿ ಅಕ್ರಮ ಕೋಳಿ ಅಂಕ: ಪೊಲೀಸರಿಂದ ದಾಳಿ, 10 ಜನ ವಶಕ್ಕೆ

Date:

ಮೂಡುಬಿದಿರೆ : ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಡೆಜಾಲು ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, 10 ಜನರನ್ನು, ನಗದು ಹಣ ಮತ್ತು ಕಾದಾಟಕ್ಕೆ ಬಳಸುತ್ತಿದ್ದ ಹುಂಜಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ವಾಲ್ಪಾಡಿ ಗ್ರಾಮದ ಉಡೆಜಾಲು ಎಂಬಲ್ಲಿನ ಮುತ್ತಯ್ಯ ಎಂಬುವವರ ಮನೆಯ ಮುಂಭಾಗದ ಗುಡ್ಡದಲ್ಲಿ ಕೆಲವು ವ್ಯಕ್ತಿಗಳು ಸೇರಿ, ಎರಡು ಅಂಕದ ಕೋಳಿಗಳಿಗೆ ಮಾರಕವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ತಯಾರಾಗಿದ್ದರು ಮತ್ತು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು.

ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ. ಜಿ. ಅವರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಈ ಕುರಿತು ಖಚಿತ ಮಾಹಿತಿ ಲಭಿಸಿ ಅಲ್ಲಿಗೆ ತೆರಳಿದ್ದಾರೆ. ಪೊಲೀಸರನ್ನು ನೋಡಿದ ಕೂಡಲೇ ಕೋಳಿ ಅಂಕದ ಜೂಜಾಟಗಾರರು ಓಡಿ ಪರಾರಿಯಾಗಲು ಯತ್ನಿಸಿದಾಗ ಸುತ್ತುವರಿದ ಪೊಲೀಸರು ತಕ್ಷಣವೇ 10 ಮಂದಿಯನ್ನು ವಶಕ್ಕೆ ಪಡೆದುಕೊಂಡರು.ಅಜಯ್ , ಸಂಗಮ್ , ಸಂದೇಶ್, ನಿತೇಶ್ ಶೆಟ್ಟಿ ,ಅರುಣ್ ಬಿ.ಎಸ್., ಕೃಷ್ಣಪ್ಪ ಪೂಜಾರಿ ,ರವಿ ಕುಲಾಲ್, ಯಾದವ್ , ದಿನೇಶ್ ಸದಾಶಿವ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌.

ಇದೇ ವೇಳೆ, ಸ್ಥಳದಿಂದ ತಪ್ಪಿಸಿಕೊಂಡು ಹೋದ ಸಂಪತ್, ಸುನಿಲ್ ಹಾಗೂ ಇತರರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.ಕೋಳಿ ಅಂಕದ ಜೂಜಾಟಕ್ಕೆ ಪಣವಾಗಿ ಬಳಸಲು ಉದ್ದೇಶಿಸಿದ್ದ 6 ಹುಂಜಗಳು ಮತ್ತು ರೂ. 4,500 ನಗದು ಹಣವನ್ನು ಪಂಚರ ಸಮ್ಮುಖದಲ್ಲಿ ಮಹಜರು ಮೂಲಕ ಸ್ವಾಧೀನಪಡಿಸಿಕೊಳ್ಳಲಾಯಿತು. ದಸ್ತಗಿರಿಯಾದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಳಿ ಅಂಕದ ದಾಳಿ ಕಾರ್ಯಾಚರಣೆಯಲ್ಲಿ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೇಶ್ ಪಿ.ಜಿ. ಮತ್ತು ಸಿಬ್ಬಂದಿಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮದ್, ರಮೇಶ್, ವೆಂಕಟೇಶ್, ಚಂದ್ರಶೇಖರ ಮತ್ತು ಉಮೇಶ್ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...