ಮದೀನಾ: ಬಸ್ ಬೆಂಕಿಗಾಹುತಿಯಾಗಿ ಮೃತಪಟ್ಟ ಉಮ್ರಾ ಯಾತ್ರಿಕರ ಮೃತದೇಹಗಳನ್ನು ಜನ್ನತುಲ್ ಬಖಿಹ್ ಖಬರ್ಸ್ತಾನದಲ್ಲಿ ಅಂತ್ಯಕ್ರಿಯೆ

Date:

ಮದೀನಾ: ಕಳೆದ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಉಮ್ರಾ ಯಾತ್ರಿಕರ ಮೃತದೇಹಗಳನ್ನು ಮದೀನಾದ ಜನ್ನತುಲ್ ಬಖಿಹ್ ಖಬರುಸ್ತಾನದಲ್ಲಿ ದಫನ ಮಾಡಲಾಯಿತು.

ಮಸ್ಜಿದುನ್ನಬವಿಯಲ್ಲಿ ಇಮಾಮ್ ಶೈಖ್ ಅಬ್ದುಲ್ ಬಾರಿ ಅಲ್ ತುಬೈತಿ ನೇತೃತ್ವದಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿದ ನಂತರ ಸೌದಿ ಅರೇಬಿಯಾದ ಅಧಿಕಾರಿಗಳು ಮತ್ತು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳ ಮುಂದಾಳತ್ವದಲ್ಲಿ ಗೌರವಪೂರ್ವಕ ಅಂತ್ಯಕ್ರಿಯೆ ನಡೆಯಿತು.

ಹೈದರಾಬಾದಿನಿಂದ ಆಗಮಿಸಿದ್ದ ಉಮ್ರಾ ಯಾತ್ರಿಕರು ಮಂಗಳವಾರ ಬೆಳಗಿನ ಜಾವ ಮಕ್ಕಾದಿಂದ ಮದೀನಾ ಪ್ರಯಾಣಿಸುತ್ತಿದ್ದ ಬಸ್ ಇಂಧನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗಾಹುತಿಯಾಗಿ 42 ಉಮ್ರಾ ಯಾತ್ರಿಕರು ಮತ್ತು 2 ಸಂದರ್ಶಕ ವೀಸಾ ಯಾತ್ರಿಕರು ಮರಣ ಹೊಂದಿದ್ದು ಒಬ್ಬ ವ್ಯಕ್ತಿ ಬದುಕಿ ಉಳಿದಿದ್ದರು.
ಮೃತರ ಕುಟುಂಬಕ್ಕೆ ನೆರವು ನೀಡಲು ಜಿದ್ದಾದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್‌ ಸಹಾಯವಾಣಿ ಕೇಂದ್ರ ಆರಂಭಿಸಿದ್ದು,
ತೆಲಂಗಾಣ ರಾಜ್ಯ ಸರ್ಕಾರವು ಸಚಿವ ಅಜರುದ್ದೀನ್ ನೇತೃತ್ವದ ನಿಯೋಗವನ್ನು ಮದೀನಾಕ್ಕೆ ಕಳುಹಿಸಿ ಮೃತರ ಕುಟುಂಬಕ್ಕೆ ಕಾನೂನು ಪ್ರಕ್ರಿಯೆ ನಡೆಸಲು ನೆರವಾಗಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...