ಯೆನೆಪೋಯ ಎಂಜಿನಿಯರಿಂಗ್ ಕಾಲೇಜಿನ ವಾಷಿ೯ಕ ಕ್ರೀಡಾಕೂಟ 2025

Date:

ಮೂಡುಬಿದಿರೆ: ಕ್ರೀಡೆಯು ನಮಗೆ ಸಮಯದ ನಿರ್ವಹಣೆಯನ್ನು, ಸರಿಯಾದ ವೇಳೆಯಲ್ಲಿ ಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳುವಂತಹ ಅನೇಕ ಬದುಕಿನ ಅವಕಾಶಗಳನ್ನು ನೀಡುತ್ತದೆ ಎಂದು ಕಬಡ್ಡಿ ರಾಷ್ಟ್ರೀಯ ಆಟಗಾರ್ತಿ ದೀಕ್ಷಾ ಕುಮಾರಿ ಹೇಳಿದರು.

ಅವರು ಸ್ವರಾಜ್ಯ ಮೈದಾನದಲ್ಲಿ ಶನಿವಾರ ತೋಡಾರಿನ ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಮತ್ತು ಕ್ರೀಡೆಗಳನ್ನು ಸಮಾನವಾಗಿ, ವ್ಯವಸ್ಥಿತ ರೀತಿಯಲ್ಲಿ ಮುನ್ನಡೆಸುವ ಅಗತ್ಯ ಕ್ರೀಡಾಳುಗಳಿಗೆ ಇದೆ ಎಂದರು.

ಯೆನೇಪೋಯ ವಿವಿಯ ಅಪರೇಷನ್ ವಿಭಾಗದ ನಿರ್ದೇಶಕ ಅಬ್ದುಲ್ಲಾ ಜಾವೇದ್, ಉಪ ಪ್ರಾಂಶುಪಾಲ ಪ್ರಭಾಕರ ಬಿ.ಕೆ., ಕ್ಯಾಂಪಸ್ ಆಡಳಿತಾಧಿಕಾರಿ ಮಹಮ್ಮದ್ ಶಾಹಿದ್, ಕ್ರೀಡಾ ನಿರ್ದೇಶಕ ಲೋಕೇಶ್ ಮತ್ತಿತರರಿದ್ದರು.

ವಿದ್ಯಾರ್ಥಿಗಳಾದ ವಾಂಚಿತಾ ಸ್ವಾಗತಿಸಿದರು. ತಾಸ್ಮಿಯಾ ವಾರ್ಷಿಕ ಕ್ರೀಡಾಕೂಟದ ವರದಿ ವಾಚಿಸಿದರು. ಇಬ್ರಿಸಾನ್ ನಿರೂಪಿಸಿದರು. ಸಂಜು ವಂದಿಸಿದರು.

ವಾರ್ಷಿಕ ಕ್ರೀಡಾಕೂಟದಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 400ಕ್ಕೂ ಅಧಿಕ ಕ್ರೀಡಾಪಟುಗಳು ಕ್ರೀಡಾಪಟುಗಳಾಗಿ ಭಾಗವಹಿಸಿದರು.

ಪಥ ಸಂಚಲನದಲ್ಲಿ ಇಸಿಇ ವಿಭಾಗವುಪ್ರಥಮ ಬಹುಮಾನವನ್ನು ಪಡೆದುಕೊಂಡಿತು.ಶಿರ್ತಾಡಿ ಭುವನ ಜ್ಯೋತಿ ಸಂಸ್ಥೆಯ ಬ್ಯಾಂಡ್ ಸೆಟ್ ತಂಡವನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...