ರೋಟರಿ ಸಂಭ್ರಮ 2025: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

Date:

ಮೂಡುಬಿದಿರೆ : ರೋಟರಿ ಕ್ಲಬ್‌ನ ಸಾಂಸ್ಕೃತಿಕ ಚಟುವಟಿಕೆಗಳು ಭಾಂಧವ್ಯವನ್ನು ಸಮೃದ್ಧಗೊಳಿಸುತ್ತದೆ. ನೆಲದ ಸಂಸ್ಕೃತಿಯನ್ನು ಪ್ರತಿಬಿಂಬಿಸುವAತಹ ಕೆಲಸ ರೋಟರಿಯ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್‌ನಂತ ಯುವ ಕ್ಲಬ್‌ಗಳಿಂದ ಆಗುತ್ತಿರುವುದು ಶ್ಲಾಘನೀಯ. ಕ್ಲಬ್ ಸ್ಥಾಪನೆ ಹೇಗೆ ಮುಖ್ಯವಾಗುತ್ತದೋ ಅದೇ ರೀತಿಯಲ್ಲಿ ಅದನ್ನು ಸಮರ್ಥವಾಗಿ ಮುನ್ನಡೆಸುವುದು ಕೂಡ ಮುಖ್ಯ ಎಂದು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಹೇಳಿದರು. ಅವರು ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್‌ಟೌನ್ ಆಶ್ರಯದಲ್ಲಿ ರೋಟರಿ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ರೋಟರಿ ಸಂಭ್ರಮ 2025-ಜಿಲ್ಲಾ ಮಟ್ಟದ ಸಾಂಸ್ಕೃತಿಗೆ ಸ್ಪರ್ಧೆಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

4ರ ಸಹಾಯಕ ಗವರ್ನರ್ ಡಾ. ರಾಜಾರಾಂ ಕೆ.ವಿ ಮುಖ್ಯ ಅತಿಥಿಯಾಗಿದ್ದು, ಸಾಮಾಜಿಕ ಚಿಂತನೆಯೊಂದಿಗೆ ರೋಟರಿ ಸಂಸ್ಥೆ ಶಿಕ್ಷಣ, ಸಂಸ್ಕೃತಿ, ಕ್ರೀಡೆಯಲ್ಲೂ ಸೇವೆ ಸಲ್ಲಿಸುತ್ತಿದೆ ಎಂದರು.
ಕಾರ್ಯಕ್ರಮ ವಿಭಾಗದ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕೆ., ಜಿಲ್ಲಾ ಸಾಂಸ್ಕೃತಿಕ ವಿಭಾಗದ ಅಧ್ಯಕ್ಷ ಪ್ರವೀಣ್ ಪಿರೇರಾ, ವಲಯ 4ರ ಸಹಾಯಕ ಗವರ್ನರ್ ಉಮೇಶ್ ರಾವ್ ಮಿಜಾರ್, ರೋಟರಿ ಶಿಕ್ಷಣ ಸಂಸ್ಥೆ ನಾರಾಯಣ ಪಿ.ಎಂ. ಸಹಾಯಕ ಗವರ್ನರ್‌ಗಳಾದ ಡಾ. ಎ. ಜಯಕುಮಾರ್ ಶೆಟ್ಟಿ, ಕೆ. ಪದ್ಮನಾಭ ರೈ, ವಲಯ ಲೆಫ್ಟಿನೆಂಟ್ ಸಿ.ಎಚ್. ಅಬ್ದುಲ್ ಗಫೂರ್, ಉದ್ಯಮಿ ಪ್ರಭಾತ್‌ಚಂದ್ರ ಜೈನ್ ಮುಖ್ಯ ಅತಿಥಿಯಾಗಿದ್ದರು.


ಕ್ಲಬ್‌ನ ಅಧ್ಯಕ್ಷ ಹರೀಶ್ ಎಂ.ಕೆ, ಕಾರ್ಯದರ್ಶಿ ಭರತ್ ಶೆಟ್ಟಿ, ಸಾಂಸ್ಕೃತಿಕ ಸಂಯೋಜಕ ಡಾ.ಮಹಾವೀರ ಜೈನ್ ಉಪಸ್ಥಿತರಿದ್ದರು. ಸರಿತಾ ಹರೀಶ್, ಡಾ.ಪ್ರಣಮ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...