ಗಂಟಾಲ್ ಕಟ್ಟೆಯಲ್ಲಿ ವೈಬ್ರೆಂಟ್ ಜೈನಕಾಶಿ ನ್ಯಾಷನಲ್ ಸ್ಕೂಲಿಗೆ ಶಿಲಾನ್ಯಾಸ

Date:

ಮೂಡುಬಿದಿರೆ: ಗಂಟಾಲ್ ಕಟ್ಟೆ ಸಮೀಪದ ಕರಿಂಜೆ ಗ್ರಾಮದಲ್ಲಿ ವನಜಾಕ್ಷಿ ವನಜಾಕ್ಷಿ ಎಜ್ಯುಷನ್ ಫೌಂಡೇಷನ್ ಹಾಗೂ ವೈಬ್ರೆಂಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳಲಿರುವ ವೈಬ್ರೆಂಟ್ ಜ್ಞಾನಕಾಶಿ ನ್ಯಾಷನಲ್ ಸ್ಕೂಲ್‌ಗೆ ಭಾನುವಾರ ಶಿಲಾನ್ಯಾಸ ನೆರವೇರಿಸಲಾಯಿತು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪ್ರಕೃತಿಯಲ್ಲಿ ಯಾವಾಗ ಸಾತ್ವಿಕ ಶಕ್ತಿ ಜಾಗೃತವಾಗಿರುತದೋ ಆ ಸಂದರ್ಭವನ್ನು ಸುಮೂರ್ಹ ಎಂದು ಕರೆಯುತ್ತೇವೆ. ಶಿಕ್ಷಣವೆನ್ನುವುದು ಮನುಷ್ಯನ ಜೀವನದ ಬಹುಮುಖ್ಯ ಘಟ್ಟ. ಮಾನವ ಬುದ್ಧಿಗೆ ಶಿಕ್ಷಣದಿಂದಾಗಿ ಸ್ವರೂಪ ಬರುತ್ತದೆ. ಮಕ್ಕಳಿಗೆ ಒಳ್ಳೆಯ ರೀತಿಯ ಭವಿಷ್ಯ ರೂಪಿಸುವ ಕೆಲಸ ವೈಬ್ರೆಂಟ್ ಜ್ಞಾನಕಾಶಿ ಸಂಸ್ಥೆಯಿಂದಾಗಲಿ ಎಂದು ನುಡಿದರು.

ಕಟೀಲು ದೇವಳದ ಆನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ, ಗಂಟಾಲ್ ಕಟ್ಟೆ ಚರ್ಚ್ ಧರ್ಮಗುರು ರೆ.ಫಾ ರೋನಲ್ಡ್ ಪ್ರಕಾಶ್ ಡಿಸೋಜ, ಗಂಟಾಲ್ ಕಟ್ಟೆ ಮಸೀದಿಯ ಧರ್ಮಗುರು ಬಶೀರ್ ಧಾರಿಮಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಶ್ರೀಕ್ಷೇತ್ರ ಪಡ್ಯಾರಬೆಟ್ಟುವಿನ ಧರ್ಮದರ್ಶಿ ಎ.ಜೀವಂಧರ್ ಕುಮಾರ್, ಹೊಸಂಗಡಿ ಅರಮನೆಯ ಸುಕುಮಾರ್ ಶೆಟ್ಟಿ, ಕರಿಂಜೆಗುತ್ತು ಕೆ.ಕೃಷ್ಣರಾಜ್ ಹೆಗ್ಡೆ, ಯುಗಪುರುಷ ಕಿನ್ನಿಗೋಳಿಯ ಭುವನಾಭಿರಾಮ ಉಡುಪ, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ಬ್ಯಾಂಕಿನ ವಿಶೇಷ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ., ಉದ್ಯಮಿ ತಿಮ್ಮಯ್ಯ ಶೆಟ್ಟಿ, ಕೆ.ಪಿ ಜಗದೀಶ್ ಅಧಿಕಾರಿ ಶಿಕ್ಷಣ ಸಂಸ್ಥೆಗೆ ಶುಭ ಕೋರಿದರು.

ವನಜಾಕ್ಷಿ ಎಜುಕೇಶನ್ ಫೌಂಡೇಷನ್ ಸಂಸ್ಥಾಪಕ ಕೆ.ಶ್ರೀಪತಿ ಭಟ್, ಟ್ರಸ್ಟಿಗಳಾದ ಬಲರಾಮ ಕೆ.ಎಸ್, ಬಾಲಕೃಷ್ಣ ಭಟ್, ಶ್ರೀನಿವಾಸ ಭಟ್, ದೀಪ್ತಿ ಬಾಲಕೃಷ್ಣ ಭಟ್, ವೈಬ್ರೆಂಟ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ಮೆಹಬೂಬ್ ಬಾಷಾ, ಚಂದ್ರಶೇಖರ್ ರಾಜೇ ಅರಸ್ ” ,ಯೋಗೇಶ್ ಬೆಡೆಕರ್, ಸುಭಾಷ್ ಝಾ, ಕಾಲೇಜಿನ ಟ್ರಸ್ಟಿ ಡಾ. ಶರತ್ ಗೋರೆ , ಡಾ. ಎಸ್. ಎನ್. ವೆಂಕಟೇಶ್ ನಾಯಕ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...