ಹಳೆಕೋಟೆ ಸಯ್ಯದ್ ಮದನಿ ಶಾಲಾ ವಾರ್ಷಿಕ ಕ್ರೀಡಾಕೂಟ

Date:


ಉಳ್ಳಾಲ: ಶಾಲೆಗಳಲ್ಲಿ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳೂ ಅಮೂಲ್ಯ. ಇತರ ಶಿಕ್ಷಣ ಸಂಸ್ಥೆಗಳಲ್ಲಿರುವ ವ್ಯವಸ್ಥೆಗಿಂತಲೂ ಹೆಚ್ಚಿನ ವ್ಯವಸ್ಥೆ ನಮ್ಮ ಸಂಸ್ಥೆಗಳಲ್ಲೂ ಇರಬೇಕೆನ್ನುವ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಡಿ.25ರಂದು ಕ್ರೀಡಾಂಗಣದ ಉದ್ಘಾಟನೆ ನಡೆಯಲಿದೆ ಎಂದು ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಸಯ್ಯದ್ ಮದನಿ ಜಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಬಿ.ಜಿ ಹನೀಫ್ ಅಭಿಪ್ರಾಯಪಟ್ಟರು.


ಉಳ್ಳಾಲ‌ದ ಮಾಸ್ತಿಕಟ್ಟೆ ಹಝ್ರತ್ ಶಾಲಾ ಮೈದಾನದಲ್ಲಿ ಶನಿವಾರ ನಡೆದ ಹಳೆಕೋಟೆ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಮತ್ತು ಸಯ್ಯದ್ ಮದನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ರೀಡೆ ಬದುಕಿನುದ್ದಕ್ಕೂ ಆರೋಗ್ಯ ಮತ್ತು ಮನಸ್ಸಿಗೆ ಸಂತೋಷ ನೀಡುತ್ತದೆ. ಹಝ್ರತ್ ಶಾಲೆಯಲ್ಲಿ ವಿಶಾಲ ಕ್ರೀಡಾಂಗಣ ನಿರ್ಮಿಸುವ ಮೂಲಕ ಟ್ರಸ್ಟ್ ಅಧೀನದ ಶಿಕ್ಷಣ ಸಂಸ್ಥೆಗಳಿಗೆ ಕ್ರೀಡಾಂಗಣ ಕೊರತೆ ನಿವಾರಿಸಲಾಗಿದೆ ಎಂದು ತಿಳಿಸಿದರು. ‌ಟ್ರಸ್ಟ್ ಕೋಶಾಧಿಕಾರಿ ಅಬೂಬಕ್ಕರ್ ಕ್ರೀಡಾಕೂಟ ಉದ್ಘಾಟಿಸಿದರು.

ಈ ಸಂದರ್ಭ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಹುಸೈನ್, ದರ್ಗಾ ಕೋಶಾಧಿಕಾರಿ ನಾಝಿಂ, ಉಳ್ಳಾಲ‌ ಗುಚ್ಚ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾ‌ರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯ ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಹಳೆಕೋಟೆ ಶಾಲಾಭಿವೃದ್ಧಿ ಸದಸ್ಯರಾದ ಅಲ್ತಾಫ್ ಯು.ಎಚ್., ಕರೀಂ‌ ಯು.ಎಚ್., ಕ್ರೀಡಾ ಸಂಘಟಕ ಸಾಜಿದ್ ಉಳ್ಳಾಲ್, ಅಧೀನ‌ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಶಿಕ್ಷಕರು ಉಪಸ್ಥಿತರಿದ್ದರು.


ಮುಖ್ಯಶಿಕ್ಷಕ ಕೆಎಂಕೆ ಮಂಜನಾಡಿ ಸ್ವಾಗತಿಸಿದರು. ಶಿಕ್ಷಕಿ ಸಪ್ನಾ ವಂದಿಸಿದರು. ಶಿಕ್ಷಕಿ ಶಕೀಲಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಮನಬೆಟ್ಟುವಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರಾ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ...

ಅಣಬೆ ಕೃಷಿ ಮತ್ತು ಸಾಬೂನು ತಯಾರಿಕೆಯ ಬಗ್ಗೆ ಮಾಹಿತಿ

ಮೂಡುಬಿದಿರೆ: ರೈತ ದಿನಾಚರಣೆ ಅಂಗವಾಗಿ ತೆಂಕ ಮಿಜಾರ್ ಗ್ರಾಮ ಪಂಚಾಯತ್ ಹಾಗೂ...

ಕೇಮಾರು: ಶಾಲಾ ವಾರ್ಷಿಕೋತ್ಸವ ಸಮಾರಂಭ

ಮೂಡುಬಿದಿರೆ : ಕೇಮಾರು ದ.ಕ.ಜಿ.ಪಂ‌‌ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ವಿಜೃಂಭಣೆಯಿಂದ...

ಶಾಲಾಡಳಿತವು ಶಿಕ್ಷಣದೊಂದಿಗೆ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ: ಶಶಿಧರ್ ಡಿ. ಡಿ. ಪಿ. ಐ.

ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ...