ಜಿಲ್ಲಾ ಹೆಗ್ಗಡೆ ಯುವ ಘಟಕದಿಂದ ‘ಕಲಾ ಸಂಭ್ರಮ’

Date:

ಮೂಡುಬಿದಿರೆ: ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು ಹಾಗೂ ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಇದರ ಸಹಯೋಗದಲ್ಲಿ ದ.ಕ ಜಿಲ್ಲಾ ಹೆಗ್ಗಡೆ ಯುವ ಘಟಕ ವತಿಯಿಂದ ವೀರಮಾರುತಿ ಸಭಾಭವನದಲ್ಲಿ ಭಾನುವಾರ ‘ಕಲಾ ಸಂಭ್ರಮ 2025’ ನ್ನು ನಿವೃತ್ತ ಶಿಕ್ಷಕಿ ಬಜಿರೆ ವಿಜಯಲಕ್ಷ್ಮಿ ಹೆಗ್ಡೆ ಉದ್ಘಾಟಿಸಿದರು.

ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ಹಟ್ಟಾಜೆಗುತ್ತು ಪ್ರಭಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿ ಬೆಂಗಳೂರು ಹೆಗ್ಗಡೆ ಸೇವಾ ಸಂಘದ ಕಾರ್ಯದರ್ಶಿ ಶಶಿಧರ ಹೆಗ್ಡೆ ಮಾತನಾಡಿ ಯುವಕರು ಶಿಕ್ಷಣದ ಜತೆಗೆ ಕಲೆ, ಸಾಹಿತ್ಯದಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಶಿಸ್ತು ಮತ್ತು ಆತ್ಮಸ್ಥೈರ್ಯ ಬೆಳೆಯುತ್ತದೆ. ಇಂದಿನ ದಿನಗಳಲ್ಲಿ ಸಾಕಷ್ಟು ಯುವ ಪ್ರತಿಭೆಗಳನ್ನು ಕಾಣುತ್ತಿದ್ದೇವೆ, ಅವಕಾಶಗಳು ಸಿಗುತ್ತಿವೆ ಆದರೆ ಅದರಲ್ಲಿ ತೊಡಗಿಸಿಕೊಳ್ಳಲು ಯುವಕರಿಗೆ ಸಮಯ ಸಿಗುತ್ತಿಲ್ಲ‌ ಮೊಬೈಲ್ ಗೀಳಿನಿಂದ ಯುವಕರು ಹೊರಬರಬೇಕು ಎಂದರು.

ವೀರಮಾರುತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ಯಾಮ ಹೆಗ್ಡೆ ಮಾತನಾಡಿ ಹೆಗ್ಗಡೆ ಸಮಾಜವು ಯುವ ಶಕ್ತಿ ಮೇಲೆ ಅಪಾರ ನಿರೀಕ್ಷೆ ಇಟ್ಟು ಕೊಂಡಿದ್ದು ಸಮಾಜದ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕೆಂದರು. ಜಿಲ್ಲಾ ಹೆಗ್ಗಡೆ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ ಮಾತನಾಡಿ ಕಲೆಯನ್ನು ದೇವಕಲೆ ಎನ್ನುತ್ತೇವೆ. ಇಂತಹ ಕಲೆಯನ್ನು ಸಿದ್ಧಿಸಿಕೊಂಡಾಗ ನಮ್ಮನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುತ್ತದೆ ಎಂದರು.

ಉತ್ತಮ ಮಕ್ಕಳ ಚಲನಚಿತ್ರ ನಿರ್ದೇಶನಕ್ಕಾಗಿ ಕರ್ನಾಟಕ ಸರಕಾರದಿಂದ ಪುರಸ್ಕೃತರಾದ ಕಿಶೋರ್ ಮೂಡುಬಿದಿರೆ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಸಬ್ ಇನ್ ಸ್ಪೆಕ್ಟರಾಗಿ ಆಯ್ಕೆಯಾದ ಸಂಹಿತ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಕಾರ್ಯದರ್ಶಿ ಶುಭರಾಜ ಹೆಗ್ಡೆ, ಕಾರ್ಕಳ ವಲಯ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸನತ್ ಹೆಗ್ಡೆ, ಸಂಧ್ಯಾ ವಸಂತ ಹೆಗ್ಡೆ, ಜಿಲ್ಲಾ ಹೆಗ್ಗಡೆ ಯುವ ಘಟಕದ ಅಧ್ಯಕ್ಷ ಅಶೋಕ್ ಹೆಗ್ಡೆ ಮತ್ತು ಕಾರ್ಯದರ್ಶಿ ನೀರಜ್ ಹೆಗ್ಡೆ ಉಪಸ್ಥಿತರಿದ್ದರು. ವೈಷ್ಣವ್ ಹೆಗ್ಡೆ ನಿರೂಪಿಸಿದರು. ದಿಶಾ ಹೆಗ್ಡೆ ಸ್ವಾಗತಿಸಿ ಶೈಲಾ ಹೆಗ್ಡೆ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಮನಬೆಟ್ಟುವಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರಾ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ...

ಅಣಬೆ ಕೃಷಿ ಮತ್ತು ಸಾಬೂನು ತಯಾರಿಕೆಯ ಬಗ್ಗೆ ಮಾಹಿತಿ

ಮೂಡುಬಿದಿರೆ: ರೈತ ದಿನಾಚರಣೆ ಅಂಗವಾಗಿ ತೆಂಕ ಮಿಜಾರ್ ಗ್ರಾಮ ಪಂಚಾಯತ್ ಹಾಗೂ...

ಕೇಮಾರು: ಶಾಲಾ ವಾರ್ಷಿಕೋತ್ಸವ ಸಮಾರಂಭ

ಮೂಡುಬಿದಿರೆ : ಕೇಮಾರು ದ.ಕ.ಜಿ.ಪಂ‌‌ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ವಿಜೃಂಭಣೆಯಿಂದ...

ಶಾಲಾಡಳಿತವು ಶಿಕ್ಷಣದೊಂದಿಗೆ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ: ಶಶಿಧರ್ ಡಿ. ಡಿ. ಪಿ. ಐ.

ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ...