ಅಮನಬೆಟ್ಟುವಿನಲ್ಲಿ ಉಚಿತ ಆರೋಗ್ಯ ಮತ್ತು ನೇತ್ರಾ ಚಿಕಿತ್ಸಾ ಶಿಬಿರ

Date:

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂಡುಬಿದಿರೆ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಯುವಕ ಮಂಡಲ ಮತ್ತು ಪ್ರಜ್ಞಾ ಯುವತಿ ಮಂಡಲ (ರಿ ) ಅಮನ ಬೆಟ್ಟು ಪಡುಮಾರ್ನಡು ಹಾಗೂ ಮೌಂಟ್ ರೋಜರಿ ಆಸ್ಪತ್ರೆ ಅಲಂಗಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರವು ಮಹಾವೀರ ಹಿರಿಯ ಪ್ರಾಥಮಿಕ ಶಾಲೆ ಅಮನಬೆಟ್ಟು ಇಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಹೊಯಿಪಾಲ ಬೆಟ್ಟ ಮಾರ್ನಾಡು ಇಲ್ಲಿಯ ಧರ್ಮ ದರ್ಶಿಗಳಾದ ರಾಜೇಶ್ ಬಲ್ಲಾಳ್ ಅವರು ಶಿಬಿರವನ್ನು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆರೋಗ್ಯದ ಕಾಳಜಿಯಿಂದ ಮಾಡುತ್ತಿರುವ ಈ ಕಾರ್ಯಕ್ರಮ ಗ್ರಾಮೀಣ ಪ್ರದೇಶದ ಜನರಿಗೆ ಬಹಳ ಪ್ರಯೋಜನಕಾರಿಯಾಗಿದೆ ಎಂದರು. ಪ್ರಸ್ತುತ ದಿನದಲ್ಲಿ ನಾವು ತೆಗೆದುಕೊಳ್ಳುವ ಆಹಾರ ಹಾಗೂ ಆಹಾರ ಪದ್ದತಿ ಯಿಂದ ನಮ್ಮ ಆರೋಗ್ಯ ಇವತ್ತು ಕೆಟ್ಟಿದೆ ಎಂದರು.

ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಯೋಜನಾಧಿಕಾರಿ ಬಿ. ಧನಂಜಯ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಉದ್ದೇಶ, ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಬಹಳಷ್ಟು ಕಾರ್ಯಕ್ರಮ ಆಯೋಜಿಸುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಿ ಎಂದರು.


ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಾಸು ದೇವ ಭಟ್, ಜನ ಜಾಗ್ರತಿ ಸದಸ್ಯರಾದ ಜಯ. ಬಿ ರವರು, ಯುವಕ ಮಂಡಲದ ಅಧ್ಯಕ್ಷರಾದ ಭರತ್. ಕೆ. ಶೆಟ್ಟಿ, ಪ್ರಜ್ಞಾ ಯುವತಿ ಮಂಡಲದ ಕಾರ್ಯ ದರ್ಶಿ ಶಶಿಕಲಾ, ಒಕ್ಕೂಟದ ಅಧ್ಯಕ್ಷ ಸುರೇಂದ್ರ ಪೂಜಾರಿ, ಮೌಂಟ್ ರೋಜರಿ ಆಸ್ಪತ್ರೆಯ ಡಾ.ಪುನೀತ್ ಪಕ್ಕಲ್, ಡಾ. ಶೋಭಿತ, ಸಂಪಕಾ೯ಧಿಕಾರಿ ಶುಭಾಕರ್, ಸೇವಾಪ್ರತಿನಿಧಿ ಉಷಾ ಕಿರಣ ಹಾಗೂ ಒಕ್ಕೂಟದ ಸದಸ್ಯರು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಯುವಕ ಮಂಡಲದ ಸರ್ವ ಸದಸ್ಯರು ಭಾಗವಹಿಸಿದ್ದರು.


ಸೇವಾಪ್ರತಿನಿಧಿ ಉಷಾ ಕಿರಣ್ ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಅವರು ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕ ಚಂದ್ರಹಾಸ ಅವರು ವಂದಿಸಿದರು. ಸುಮಾರು 106 ಜನರು ಭಾಗವಹಿಸಿ ಬಿ. ಪಿ, ಶುಗರ್, ಕಣ್ಣಿನ ತಪಾಸಣೆ, ಜನರಲ್ ತಪಾಸಣೆ ನಡೆಸಿ ಕಾರ್ಯಕ್ರಮ ದ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...