ಡಿ 28ರಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು–ಸಾಲೆತ್ತೂರು ಇದರ ವತಿಯಿಂದ ಅಂಬುಲೆನ್ಸ್ ಸೇವೆ ಲೋಕಾರ್ಪಣೆ

Date:

ವಿಟ್ಲ: ಸಾಮಾಜಿಕ ಸೇವೆ ಮತ್ತು ಮಾನವೀಯತೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು – ಸಾಲೆತ್ತೂರು ಇದರ ವತಿಯಿಂದ ಸಾರ್ವಜನಿಕ ಸೇವೆಗೆ ಸಮರ್ಪಿತ ಆಂಬುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಇದೇ ಡಿಸೆಂಬರ್ 28ರ ಆದಿತ್ಯವಾರದಂದು ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆಯಲಿದೆ.

ಈ ಆಂಬುಲೆನ್ಸ್ ಸೇವೆ ತುರ್ತು ಅಪಘಾತ ಪರಿಸ್ಥಿತಿಯಲ್ಲಿ ಗ್ರಾಮಸ್ಥರು, ಸುತ್ತಮುತ್ತಲಿನ ಪ್ರದೇಶದ ಜನತೆ, ಅಗತ್ಯವಿರುವ ರೋಗಿಗಳು ಹಾಗೂ ಸಾಮಾಜಿಕ ಕಾರ್ಯಗಳಿಗೆ ಯಾವ ಸಮಯದಲ್ಲಾದರೂ ಲಭ್ಯವಾಗುವಂತೆ ಟ್ರಸ್ಟ್ ವತಿಯಿಂದ ವ್ಯವಸ್ಥೆ ಮಾಡಲಾಗಿದೆ.

ಜನತಾ ಸೇವೆಯನ್ನು ಕಣ್ಮಣಿಯಾಗಿ ಕಾಣುವ ಉದ್ದೇಶದಿಂದ ಈ ಯೋಜನೆ ರೂಪುಗೊಂಡಿದ್ದು, ಇದರಿಂದ ಸಾಮಾನ್ಯ ಜನರಿಗೆ ವೇಗವಾದ ಮತ್ತು ಭದ್ರ ವೈದ್ಯಕೀಯ ತುರ್ತು ಬೆಂಬಲ ದೊರೆಯುವ ನಿರೀಕ್ಷೆ ಇದೆ.

ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಖಾದರ್ ಸಾಲೆತ್ತೂರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...