ಡಿ 28ರಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು–ಸಾಲೆತ್ತೂರು ಇದರ ವತಿಯಿಂದ ಅಂಬುಲೆನ್ಸ್ ಸೇವೆ ಲೋಕಾರ್ಪಣೆ

Date:

ವಿಟ್ಲ: ಸಾಮಾಜಿಕ ಸೇವೆ ಮತ್ತು ಮಾನವೀಯತೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು – ಸಾಲೆತ್ತೂರು ಇದರ ವತಿಯಿಂದ ಸಾರ್ವಜನಿಕ ಸೇವೆಗೆ ಸಮರ್ಪಿತ ಆಂಬುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಇದೇ ಡಿಸೆಂಬರ್ 28ರ ಆದಿತ್ಯವಾರದಂದು ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆಯಲಿದೆ.

ಈ ಆಂಬುಲೆನ್ಸ್ ಸೇವೆ ತುರ್ತು ಅಪಘಾತ ಪರಿಸ್ಥಿತಿಯಲ್ಲಿ ಗ್ರಾಮಸ್ಥರು, ಸುತ್ತಮುತ್ತಲಿನ ಪ್ರದೇಶದ ಜನತೆ, ಅಗತ್ಯವಿರುವ ರೋಗಿಗಳು ಹಾಗೂ ಸಾಮಾಜಿಕ ಕಾರ್ಯಗಳಿಗೆ ಯಾವ ಸಮಯದಲ್ಲಾದರೂ ಲಭ್ಯವಾಗುವಂತೆ ಟ್ರಸ್ಟ್ ವತಿಯಿಂದ ವ್ಯವಸ್ಥೆ ಮಾಡಲಾಗಿದೆ.

ಜನತಾ ಸೇವೆಯನ್ನು ಕಣ್ಮಣಿಯಾಗಿ ಕಾಣುವ ಉದ್ದೇಶದಿಂದ ಈ ಯೋಜನೆ ರೂಪುಗೊಂಡಿದ್ದು, ಇದರಿಂದ ಸಾಮಾನ್ಯ ಜನರಿಗೆ ವೇಗವಾದ ಮತ್ತು ಭದ್ರ ವೈದ್ಯಕೀಯ ತುರ್ತು ಬೆಂಬಲ ದೊರೆಯುವ ನಿರೀಕ್ಷೆ ಇದೆ.

ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಖಾದರ್ ಸಾಲೆತ್ತೂರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...