ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ
ಮಂಗಳೂರು ಜ26 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ನಡೆಯಿತು.

ಕಾರ್ಯಕ್ರಮದ ಧ್ವಜಾರೋಹಣಗೈದ ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ರವರು ಸಂವಿಧಾನ ಕೇವಲ ಪುಸ್ತಕವಲ್ಲ ಅದು ಪ್ರಜಾಪ್ರಭುತ್ವದ ಜೀವ ಕಾರ್ಮಿಕರಾದ ನಾವೆಲ್ಲರೂ ಸ್ವಾತಂತ್ರ್ಯ ಸಮಾನತೆ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತ ನಮ್ಮ ಹಕ್ಕುಗಳನ್ನು ಸಂವಿಧಾನತ್ಮಕವಾಗಿ ಪಡೆಯಲು ಶಕ್ತಿ ಮೀರಿ ಪ್ರಯತ್ನ ಪಡಬೇಕೆಂದು ಗಣ ರಾಜ್ಯೋತ್ಸವದ ಅಂಗವಾಗಿ ಸಂದೇಶ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗರೆ, ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ ಕೋಶಾಧಿಕಾರಿ ಝುಬೈರ್ ಮಳಲಿ ಹಾಗೂ ವಿವಿಧ ಸಂಘಸಂಸ್ಥೆಗಳ ನಾಯಕರು ಉಪಸ್ಥಿತರಿದ್ದರು. ಎಸ್.ಡಿ.ಟಿ.ಯು ಮಂಗಳೂರು ಸೌತ್ ವಲಯ ಕೋಶಾಧಿಕಾರಿ ಶರೀಫ್ ಕುತ್ತಾರ್ ಸ್ವಾಗತಿಸಿದರು. ನವಾಝ್ ಕುಪ್ಪೆಪದವು ಧನ್ಯವಾದಗೈದರು.


