ತೌಡುಗೋಳಿ: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಓವರ್ ಹೆಡ್ ಟ್ಯಾಂಕ್ ಗೆ ಶಂಕು ಸ್ಥಾಪನೆ

Date:

ಸ್ಪೀಕರ್ ಯು. ಟಿ. ಖಾದರ್ ಅವರ ಕನಸಿನ ಯೋಜನೆಯಾ ಗಿರುವ ಮಂಗಳೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ದಿನದ 24ಗಂಟೆ ಕುಡಿಯುವ ನೀರು ಸರಬರಾಜಿಗೆ ಮನೆ ಮನೆಗೆ ನಲ್ಲಿ ಸಂಪರ್ಕ ಈಗಾಗಲೇ ಆಗಿದ್ದು ಈ ಕಾಮಗಾರಿಯಿಂದ ಜನರಿಗೆ ಬಹು ದೊಡ್ಡ ಉಪಯೋಗವಾಗಲಿದೆ ಎಂದು ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ನವಾಜ್ ನರಿಂಗಾನ ಹೇಳಿದರು.


ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ನರಿಂಗಾನ ಗ್ರಾಮದಲ್ಲಿ ನಿರ್ಮಾಣ ಆಗಲಿರುವ ಓವರ್ ಹೆಡ್ ಟ್ಯಾಂಕ್ ಗೆ ತೌಡುಗೋಳಿಯ ಯುವಕ ಮಂಡಲದ ವಠಾರದಲ್ಲಿ ಶನಿವಾರ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಈಗಾಗಲೇ ಬಹಳಷ್ಟು ಕಾಮಗಾರಿ ನಡೆದಿದೆ. ಹಾಗೆಯೇ ಗ್ರಾಮದ ಎತ್ತರದ ಪ್ರದೇಶದಲ್ಲಿ ಬೃಹತ್ ಟ್ಯಾಂಕ್ ನಿರ್ಮಾಣ ಆಗಲಿದೆ ಎಂದರು.
ನರಿಂಗಾನ ಗ್ರಾಮ ಪಂಚಾಯಿತಿ ಹಿರಿಯ ಸದಸ್ಯ ಶೇಖಬ್ಬ ನಿಡ್ಮಾಡ್, ಸದಸ್ಯರಾದ ಮುರಲೀಧರ ಶೆಟ್ಟಿ ಮೋರ್ಲ , ಸುಂದರ ಪೂಜಾರಿ ಕೋಡಿ ಮಜಲು, ಯುವಕ ಮಂಡಲದ ಮಾಜಿ ಗೌರವಾಧ್ಯಕ್ಷ ಉದಯ ಶಂಕರ್ ಶೆಟ್ಟಿ ಬಲೆತ್ತೋಡು, ಸ್ಥಳೀಯರಾದ ಬಾವುಚ್ಚ, ಫಾರೂಕ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹರ್ರುತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಫುಟ್‌ಬಾಲ್ ಸಾಧನೆ

ಉಳ್ಳಾಲ: ಹಝ್ರುತ್ ಸಯ್ಯಿದ್ ಮದನಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಇಂದು...

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...