ಬಂಟ್ವಾಳ: ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ತಹಶಿಲ್ದಾರರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Date:

ಬಂಟ್ವಾಳ ತಾಲ್ಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ಧಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆಯೂ, ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ನೇತೃತ್ವದ ನಿಯೋಗದಿಂದ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

ನಿಯೋಗದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಹಾಗೂ ಬಿ ಸಿ ರೋಡ್ ಸಿಟಿ ಕೌನ್ಸಿಲ್ ಅಧ್ಯಕ್ಷರಾದ ಬಶೀರ್ ಪಲ್ಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...