ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

Date:

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ ಮಹಾಸಭೆಯು ಸಿದ್ದೀಕ್ ಸಜಿಪ ಇವರ ಅಧ್ಯಕ್ಷತೆಯಲ್ಲಿ ರವಿವಾರ ಅಸರ್ ನಮಾಜ್ ಬಳಿಕ ಮಸ್ಜಿದ್ ಬಿಲಾಲ್ ನಲ್ಲಿ ನಡೆಯಿತು.


ಸಭೆಯಲ್ಲಿ ಜುಮಾ ಮಸ್ಜಿದ್ ಮತ್ತು ಮಸ್ಜಿದ್ ಅಧೀನದಲ್ಲಿ ನಡೆಯುತ್ತಿರುವ ಮದ್ರಸಾ ಗಳಿಗೆ ಸಂಬಂಧಿಸಿದ ವಾರ್ಷಿಕ ವರದಿ ಹಾಗು ಲೆಕ್ಕ ಪತ್ರಗಳನ್ನು ಮೊಹಮ್ಮದ್ ಸಿರಾಜ್ ಮತ್ತು ಶಫೀಕ್ ರವರು ಮಂಡಿಸಿದರು. ಮುಂದಿನ ದಿನಗಳಲ್ಲಿ ಮಸ್ಜಿದ್ ಮತ್ತು ಮದ್ರಸಾ ವ್ಯವಸ್ಥೆಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.


ನಂತರ ನೂತನ ಆಡಳಿತ ಸಮಿತಿ ಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಜಾಬಿರ್ ಬೊಳಮೆ, ಉಪಾಧ್ಯಕ್ಷರಾಗಿ ನೌಶಾದ್, ಪ್ರ.ಕಾರ್ಯದರ್ಶಿಯಾಗಿ ಇರ್ಷಾದ್, ಜೊತೆ ಕಾರ್ಯದರ್ಶಿಯಾಗಿ ಶಫೀಕ್, ಕೋಶಾಧಿಕಾರಿಯಾಗಿ ಸಿದ್ದೀಕ್ ರವರನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಸಿರಾಜ್, ಅಲ್ತಾಫ್, ಇಲ್ಯಾಸ್, ಹಬೀಬ್, ರಹಮಾನ್, ಫಯಾಝ್ ರವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....