ಸುಳ್ಯ: ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈಯವರ ಅಧಿಕೃತ ಭೇಟಿಯ ಅಂಗವಾಗಿ ಸುಳ್ಯ ಜ್ಯೋತಿ ಬಳಿ ನಿರ್ಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಆಂಬ್ಯುಲೆನ್ಸ್ ನಿಲ್ದಾಣವನ್ನು ಲೋಕಾರ್ಪಣೆ ಗೊಳಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಾಮೊಟ್ಟೆ ವಹಿಸಿದ್ದರು. ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫಾ ಸೇರಿದಂತೆ ಮತ್ತಿತರರು ಭಾಗವಹಿಸಿ ಶುಭ ಹಾರೈಸಿದರು.



