ಬೆಂಗಳೂರು: ಲ್ಯಾಂಡ್ ಮಾರ್ಕ್ ಫೋರಮ್ ಸಂಸ್ಥೆ ಆಯೋಜಿಸಿರುವ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರವು ನವದೆಹಲಿಯ ಚಿನ್ಮಯ ಮಿಷನ್, ಲೋಧಿ ರೋಡ್, ರಾಮಕೃಷ್ಣ ಮಠದಲ್ಲಿ ನಡೆಯಲಿರುವುದು. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಮಾನ್ಯ ಶ್ರೀ ಯು.ಟಿ. ಖಾದರ್ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಾಗಾರವು ಏಪ್ರಿಲ್ 17 ರಿಂದ 21, 2026 ರವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ರಾತ್ರಿ 11ರ ವರೆಗೆ ನಡೆಯಲಿದೆ. ವಿಶ್ವದ ವಿವಿಧ ದೇಶಗಳಿಂದ ಸುಮಾರು 200ಕ್ಕೂ ಹೆಚ್ಚು ಅಂತರ್ರಾಷ್ಟ್ರೀಯ ಪ್ರತಿನಿಧಿಗಳು ಭಾಗವಹಿಸಲಿದ್ದು, ನಾಯಕತ್ವ, ವ್ಯಕ್ತಿತ್ವ ವಿಕಾಸ, ಪರಿಣಾಮಕಾರಿ ಸಂವಹನ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತಂತೆ ಚರ್ಚೆಗಳು ನಡೆಯಲಿವೆ.
ಸ್ಪೀಕರ್ ಖಾದರ್ ಅವರ ಉಪಸ್ಥಿತಿ ಈ ಕಾರ್ಯಾಗಾರಕ್ಕೆ ವಿಶೇಷ ಮೆರಗು ತರುವುದಲ್ಲದೆ, ಅವರ ನಾಯಕತ್ವದ ಅನುಭವ ಮತ್ತು ಮಾರ್ಗದರ್ಶನವು ಯುವಕರಿಗೆ ಹಾಗೂ ಭಾಗವಹಿಸುವವರಿಗೆ ಪ್ರೇರಣೆಯಾಗಲಿದೆ. ಈ ಕಾರ್ಯಾಗಾರವು ಜಾಗತಿಕ ಮಟ್ಟದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಪರಿವರ್ತನೆಗೆ ದಾರಿ ತೋರಿಸುವ ಮಹತ್ವದ ವೇದಿಕೆಯಾಗಿ ಹೊರಹೊಮ್ಮಲಿದೆ.


