ಉಳ್ಳಾಲ: ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯದ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಎಸ್ಡಿಪಿಐ ಕರ್ನಾಟಕ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಒತ್ತಾಯಿಸಿದ್ದಾರೆ.

ಅವರು ಕಲ್ಲಾಪುನಿನ ಯುನಿಟ್ ಹಾಲ್ ನಲ್ಲಿ ನಡೆಯುತ್ತಿರುವ SDPi ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಅಲ್ಪಸಂಖ್ಯಾತ ಸಮುದಾಯದ ಬೆಂಬಲವಿಲ್ಲದೆ ಕಾಂಗ್ರೆಸ್ ಅಧಿಕಾರ ಹಿಡಿಯಲು ಸಾಧ್ಯವಿರಲಿಲ್ಲ ರಾಜ್ಯದಲ್ಲಿ ಬರೋಬ್ಬರಿ 55 ಲಕ್ಷ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಕಾಂಗ್ರೆಸ್ ಪಕ್ಷವು ಸುಲಭವಾಗಿ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು. ಮುಸ್ಲಿಂ ಸಮುದಾಯವೇ ನಿಮ್ಮ ಬಹುಮತಕ್ಕೆ ಪ್ರಮುಖ ಕಾರಣವಾಗಿರುವಾಗ, ಅದೇ ಸಮುದಾಯದ ಅರ್ಹ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುವುದು ನ್ಯಾಯಸಮ್ಮತವಾಗಿದೆ,” ಎಂದು ಅವರು ಪ್ರತಿಪಾದಿಸಿದ್ದರು.
ಈ ಸಂದರ್ಭದಲ್ಲಿ ಎಸ್ ಡಿಪಿಐ ಮುಖಂಡರಾದ ಅನ್ವರ್ ಸದಾತ್ ಬಜತ್ತೂರು, ರಿಯಾಝ್ ಕಡಂಬು, ಝಹೀದ್ ಮಲಾರ್ ಉಪಸ್ಥಿತರಿದರು.


