
ದೇರಳಕಟ್ಟೆ, ಆ.31: ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಬೆಳವಣಿಗೆಯ ನಿಟ್ಟಿನಲ್ಲಿ ಉಳ್ಳಾಲ ತಾಲೂಕು ಮಟ್ಟದಲ್ಲಿ ಕಳೆದ 10 ವರ್ಷದಿಂದ ಕಾರ್ಯಾಚರಿಸುತ್ತಿರುವ ಬ್ಯಾರಿ ಎಲ್ತ್ಕಾರ್ ಪಿನೆ ಕಲಾವಿದಮಾರೊ ಕೂಟ (ಮೇಲ್ತೆನೆ)ದ ದಶಮಾನೋತ್ಸವ ಕಾರ್ಯಕ್ರಮದ ಲೋಗೋವನ್ನು ರವಿವಾರ ಬಿಡುಗಡೆಗೊಳಿಸಲಾಯಿತು.
ದೇರಳಕಟ್ಟೆಯ ದುಬೈ ಪ್ಲಾಝಾದಲ್ಲಿರುವ ದಶಮಾನೋತ್ಸವದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹೀಂ ನಡುಪದವು ಅಧ್ಯಕ್ಷತೆ ವಹಿಸಿದರು. ಲೋಗೋ ವಿನ್ಯಾಸಗೊಳಿಸಿದ ಮೇಲ್ತೆನೆಯ ಜೊತೆ ಕಾರ್ಯದರ್ಶಿ ಸಿದ್ದೀಕ್ ಎಸ್. ರಾಝ್ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮೇಲ್ತೆನೆಯ ಕೋಶಾಧಿಕಾರಿ ಮನ್ಸೂರ್ ಅಹ್ಮದ್ ಸಾಮಣಿಗೆ, ಉಪಾಧ್ಯಕ್ಷ ಅಶ್ರಫ್ ಡಿ.ಎ., ಸದಸ್ಯರಾದ ಟಿ. ಇಸ್ಮಾಯಿಲ್ ಮಾಸ್ಟರ್, ಮುಹಮ್ಮದ್ ಬಾಷಾ ನಾಟೆಕಲ್, ಬಶೀರ್ ಅಹ್ಮದ್ ಕಿನ್ಯ, ಅಬ್ದುಲ್ ಬಶೀರ್ ಕಲ್ಕಟ್ಟ, ರಫೀಕ್ (ಇಬ್ರಾಹೀಂ) ಮುದುಂಗಾರುಕಟ್ಟೆ, ಶರೀಫ್ ಪಟ್ಟೋರಿ ಉಪಸ್ಥಿತರಿದ್ದರು. ಮೇಲ್ತೆನೆಯ ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್ ಕಾರ್ಯಕ್ರಮ ನಿರೂಪಿಸಿದರು.