ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಖಾಜಿಯಾಗಿದ್ದ ಗೌರವಾನ್ವಿತ ಧಾರ್ಮಿಕ ಮುಖಂಡರಾದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಆಳವಾದ ಸಂತಾಪಗಳು.
ಸಮುದಾಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸರ್ವಶಕ್ತನಾದ ಅಲ್ಲಾಹನು ಮಗ್ಫಿರತ್ ನೀಡಲಿ ಜನ್ನಾತುಲ್ ಫಿರ್ದೌಸ್ನಲ್ಲಿ ಉನ್ನತ ಸ್ಥಾನ ನೀಡಲಿ ಮತ್ತು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅಧ್ಯಕ್ಷರು ಮತ್ತು ಸದಸ್ಯರು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಉಳ್ಳಾಲ ಇವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.



