ಮೂಡುಬಿದಿರೆ: ಇಲ್ಲಿನ ರೋಟರಿ ಪಿ.ಯು.ಕಾಲೇಜಿನ ವಿದ್ಯಾರ್ಥಿ ಸಂಘವು ಮಂಗಳವಾರ ಉದ್ಘಾಟನೆಗೊಂಡಿತು. ಖ್ಯಾತ ವಾಗ್ಮಿ,ಬರಹಗಾರರು ಆದ ಅರವಿಂದ ಚೊಕ್ಕಾಡಿ ಉದ್ಘಾಟಿಸಿ ಕಾಲೇಜಿನ ಮಕ್ಕಳಿಗೆ ಇರಬೇಕಾದ ನಾಯಕತ್ವದ ಗುಣ ಮತ್ತು ಶಿಸ್ತು, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಆಳವಡಿಸುವ ಮೌಲ್ಯಗಳ ಬಗ್ಗೆ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರಜೆಗಳ ಹಕ್ಕುಗಳ ಮಹತ್ವವನ್ನು ತಿಳಿ ಹೇಳಿದರು.

ರೋಟರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ|| ಬಿ.ಎ ಯತಿಕುಮಾರ ಸ್ವಾಮಿ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಉತ್ತಮ ನಾಯಕ ಯಾರು ಮತ್ತು ನಾಯಕತ್ವ ವಹಿಸುವಲ್ಲಿ ಅವನ ಪಾತ್ರವನ್ನುಜ್ಞಾನದ ಅರಿವನ್ನು ಬೆಳೆಸುವುದರ ಜೊತೆಗೆ ಒಬ್ಬ ವಿದ್ಯಾರ್ಥಿಯಾದವನು ಕಲಿಸಿದ ಗುರುಗಳಿಗೆ ,ಹೆತ್ತ ತಂದೆ ತಾಯಿಗೆ ಮತ್ತು ಕಲಿತ ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತರಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ರವಿ ಕುಮಾರ್ ಇವರು ವಿದ್ಯಾರ್ಥಿ ಸಂಘದ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.
ಕಾಲೇಜಿನ ಉಪಪ್ರಾಂಶುಪಾಲೆ ವೈಶಾಲಿ ಸ್ವಾಗತಿಸಿದರು. ಆಂಗ್ಲ ಭಾಷೆ ಉಪನ್ಯಾಸಕ ಆನ್ಶಿಲ್ ಸೆರಾವೋ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಭಾಷೆ ಉಪನ್ಯಾಸಕ ಗೌರಿಶಂಕರ್ ಇವರು ವಂದಿಸಿದರು.


