ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ

Date:

ಬಂಟ್ವಾಳ: ಸಜಿಪಮೂಡ ಗ್ರಾಮದ ಕಾರಜೆ, ಪಣೊಲಿಬೈಲ್, ಬೊಳ್ಳಾಯಿ, ಕಂಚಿಲ, ನಗ್ರಿ, ಜಾಡಕೊಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಮಿತಿ ಮೀರಿದೆ. ವಿಶೇಷವಾಗಿ ಬೊಳ್ಳಾಯಿ ಪೇಟೆ ಪ್ರದೇಶದಲ್ಲಿ ಶಾಲಾ-ಕಾಲೇಜು, ಮದ್ರಸ, ದೇವಾಲಯ, ಮಸೀದಿಗಳಿಗೆ ಬರುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ನಾಯಿಗಳಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಬೀದಿ ನಾಯಿಗಳು ಅಟ್ಟಾಡಿಸುವ ಘಟನೆಗಳು ಸಂಭವಿಸುತ್ತಿದ್ದು, ಯಾವುದೇ ಕ್ಷಣದಲ್ಲೂ ಗಂಭೀರ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ಬೀದಿ ನಾಯಿಗಳ ನಿಗ್ರಹಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಎಸ್‌ಡಿಪಿಐ ಬಂಟ್ವಾಳ ವಿಧಾನಸಭ ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...