
ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರತಿ ಕೃಷ್ಣರನ್ನು ಅನಿವಾಸಿ ಭಾರತೀಯ ನಾಯಕರು ಅವರ ಕಚೇರಿಯಲ್ಲಿ ಸನ್ಮಾನಿಸಿದರು.
ಆರತಿ ಕೃಷ್ಣರನ್ನು ಸನ್ಮಾನಿಸಿದವರ ಪೈಕಿ, ಸೌದಿ ಅರೇಬಿಯಾದಲ್ಲಿನ ಅಲ್ ಮುಝೈನ್ ಕಂಪೆನಿಯ ಸಿಇಒ, ಅನಿವಾಸಿ ಭಾರತೀಯ ಉದ್ಯಮಿ ಝಕರಿಯಾ ಜೋಕಟ್ಟೆ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಡಾ.ಅಬ್ದುಲ್ ಶಕೀಲ್ ದೇರಳಕಟ್ಟೆ, ಬಹ್ರೈನ್ ನ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಮನ್ಸೂರ್, ದುಬೈ ಹೋಟೆಲ್ ಉದ್ಯಮಿ ಪ್ರವೀಣ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.
ಉದ್ಯಮಿ ಮೊಹಮ್ಮದ್ ಇಕ್ಬಾಲ್, ಬೆಳ್ಮ ಗ್ರಾ.ಪ ಸದಸ್ಯ ಇಕ್ಬಾಲ್ ಎಚ್.ಆರ್, ಕಾಂಗ್ರೆಸ್ ಮುಖಂಡ ನಾಸೀರ್ ಸಾಮನಿಗೆ, ಜಲಾಲ್ ಬಾಗ್ ಅಸೋಸಿಯೇಷನ್ ಅಧ್ಯಕ್ಷ ಹಸನ್ ಅಲಿ, ಇಲ್ಯಾಸ್ ಚಾರ್ಮಾಡಿ, ಕಲಂದರ್ ದೇರಳಕಟ್ಟೆ ಉಪಸ್ಥಿತರಿದ್ದರು.
ಆರತಿ ಕೃಷ್ಣರ ಸಾಮಾಜಿಕ ಸೇವೆಯನ್ನು ಶ್ಲಾಘಿಸಿದ ಅನಿವಾಸಿ ಭಾರತೀಯ ನಿಯೋಗವು, ಅವರಿಗೆ ಶುಭ ಕೋರಿತು.

