ಬೆಳುವಾಯಿಯಲ್ಲಿ 45 ವಷ೯ಗಳ ನಂತರ ನಡೆದ ಅಪರೂಪದ ಗುಡ್ಜಿ ನೇಮ

Date:

ಮೂಡುಬಿದಿರೆ: ಬೆಳುವಾಯಿ ಗ್ರಾಮದಲ್ಲಿ 45 ವರ್ಷಗಳ ಬಳಿಕ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಗುತ್ತಿನಾರ್ ನರೇಶ್ ಶೆಟ್ಟಿ ಬರಕಳಗುತ್ತು ನೇತೃತ್ವದಲ್ಲಿ ಗುಡ್ಜಿ ನೇಮವು ಶ್ರೀ ಕುಕ್ಕಿನಂತ್ತಾಯ, ಕೊಡಮಣಿತ್ತಾಯ, ವ್ಯಾಘ್ರಚಾಮುಂಡಿ-ಪಂಜುರ್ಲಿ ಹಾಗೂ ಬ್ರಹ್ಮಬೈದರ್ಕಳ ದೈವಸ್ಥಾನ ಕಲ್ಲೋಳಿ ಪಾದೆ ಬಾಕಿಮಾರು ಗದ್ದೆಯಲ್ಲಿ ಮಂಗಳವಾರ ರಾತ್ರಿ ನಡೆಯಿತು.


ಬಾಕಿಮಾರು ಗದ್ದೆಯಲ್ಲಿ ವಿಶಾಲವಾದ ಚಪ್ಪರ, ದೈವಗಳ ಹೊಸ ಮಂಚ, 4 ಕಂಬಗಳಿಂದ 9 ಅಂತಸ್ತುಗಳನ್ನು ಒಳಗೊಂಡ ಗುಡ್ಜಿಯನ್ನು ನಿರ್ಮಿಸಲಾಗಿತ್ತು. ಎಲ್ಲಾ ಹೊಸ ಪರಿಕರಗಳಿಂದಲೇ ಗುಡ್ಜಿ ನೇಮ ನಡೆಸುವುದು ವಿಶೇಷತೆಯಾಗಿದೆ. ಬೆಳಿಗ್ಗೆ ಭಂಡಾರ ಆಗಮನದ ಬಳಿಕ ಗಣಪತಿ ಹೋಮ ನಡೆಯಿತು. ರಾತ್ರಿ ರಾಜನ್‌ದೈವ ಕುಕ್ಕಿನಂತಾಯಿ-ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ, ಪಿಲಿಚಾಮುಂಡಿ, ಪಂಜುರ್ಲಿ ದೈವಗಳ ನೇಮ ನಡೆಯಿತು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...