ಬೆಳುವಾಯಿಯಲ್ಲಿ 45 ವಷ೯ಗಳ ನಂತರ ನಡೆದ ಅಪರೂಪದ ಗುಡ್ಜಿ ನೇಮ

Date:

ಮೂಡುಬಿದಿರೆ: ಬೆಳುವಾಯಿ ಗ್ರಾಮದಲ್ಲಿ 45 ವರ್ಷಗಳ ಬಳಿಕ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಗುತ್ತಿನಾರ್ ನರೇಶ್ ಶೆಟ್ಟಿ ಬರಕಳಗುತ್ತು ನೇತೃತ್ವದಲ್ಲಿ ಗುಡ್ಜಿ ನೇಮವು ಶ್ರೀ ಕುಕ್ಕಿನಂತ್ತಾಯ, ಕೊಡಮಣಿತ್ತಾಯ, ವ್ಯಾಘ್ರಚಾಮುಂಡಿ-ಪಂಜುರ್ಲಿ ಹಾಗೂ ಬ್ರಹ್ಮಬೈದರ್ಕಳ ದೈವಸ್ಥಾನ ಕಲ್ಲೋಳಿ ಪಾದೆ ಬಾಕಿಮಾರು ಗದ್ದೆಯಲ್ಲಿ ಮಂಗಳವಾರ ರಾತ್ರಿ ನಡೆಯಿತು.


ಬಾಕಿಮಾರು ಗದ್ದೆಯಲ್ಲಿ ವಿಶಾಲವಾದ ಚಪ್ಪರ, ದೈವಗಳ ಹೊಸ ಮಂಚ, 4 ಕಂಬಗಳಿಂದ 9 ಅಂತಸ್ತುಗಳನ್ನು ಒಳಗೊಂಡ ಗುಡ್ಜಿಯನ್ನು ನಿರ್ಮಿಸಲಾಗಿತ್ತು. ಎಲ್ಲಾ ಹೊಸ ಪರಿಕರಗಳಿಂದಲೇ ಗುಡ್ಜಿ ನೇಮ ನಡೆಸುವುದು ವಿಶೇಷತೆಯಾಗಿದೆ. ಬೆಳಿಗ್ಗೆ ಭಂಡಾರ ಆಗಮನದ ಬಳಿಕ ಗಣಪತಿ ಹೋಮ ನಡೆಯಿತು. ರಾತ್ರಿ ರಾಜನ್‌ದೈವ ಕುಕ್ಕಿನಂತಾಯಿ-ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ, ಪಿಲಿಚಾಮುಂಡಿ, ಪಂಜುರ್ಲಿ ದೈವಗಳ ನೇಮ ನಡೆಯಿತು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...