ಗಂಭೀರ ಆರೋಗ್ಯ ಸಮಸ್ಯೆಯಲ್ಲಿ ಮೂಡಬಿದಿರೆಯ ಯುವತಿ: ಸಹಾಯಹಸ್ತದ ನಿರೀಕ್ಷೆಯಲ್ಲಿ ಕುಟುಂಬ

Date:

ಮೂಡುಬಿದಿರೆ: ಪುತ್ತಿಗೆ ಗ್ರಾಮದ ಬೀರಬೆಟ್ಟು ಸಂಪಿಗೆ ನಿವಾಸಿ ಜಯಕರ ಅವರ ಪುತ್ರಿ ಅಕ್ಷತಾ ಕುಮಾರಿ ಅವರು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಕೊಯಮುತ್ತೂರಿನ ಕೋವೈ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಕ್ಷತಾ ಕುಮಾರಿ ಅವರು ಕಿಡ್ನಿ ವೈಫಲ್ಯ ಹಾಗೂ‌ ಸರ್ಪಸುತ್ತು ಸೇರಿದಂತೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಅಪಾರ ವೆಚ್ಚವಾಗುತ್ತಿದೆ. ಈಗಾಗಲೇ ಸುಮಾರು 300 ದಿನಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿ ದಾಖಲಾಗಿರುವುದರಿಂದ ವಯಸ್ಸಾದ ತಂದೆ-ತಾಯಿಗಳಿಗೆ ಚಿಕಿತ್ಸೆ ವೆಚ್ಚವನ್ನು ಭರಿಸುವುದು ಅಸಾಧ್ಯವಾಗುತ್ತಿದೆ.

ಅಕ್ಷತಾ ಕುಮಾರಿ ಅವರ ತಂದೆ ದೀರ್ಘಕಾಲದ ಸಕ್ಕರೆ ಖಾಯಿಲೆಯಿಂದ ಹಾಸಿಗೆ ಹಿಡಿದ ಸ್ಥಿತಿಯಲ್ಲಿದ್ದು, ಕುಟುಂಬವು ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದೆ. ಬಡ ಕುಟುಂಬದ ಹಿನ್ನೆಲೆಯಿರುವುದರಿಂದ ಮುಂದಿನ ಚಿಕಿತ್ಸೆಗೆ ಅಗತ್ಯವಿರುವ ಹಣವನ್ನು ಹೊಂದಿಸುವುದು ಅಸಾಧ್ಯವಾಗಿದ್ದು, ಸಹೃದಯ ಜನರಿಂದ ನೆರವು ನಿರೀಕ್ಷಿಸಲಾಗಿದೆ.

ಮೂಡುಬಿದಿರೆ ಪುರಸಭೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಿಬ್ಬಂದಿಯಾಗಿರುವ ಅಕ್ಷತಾ ಕುಮಾರಿಯ ಚಿಕಿತ್ಸೆಗೆ ತಮ್ಮಿಂದಾಗುವ ಧನಸಹಾಯವನ್ನು ನೀಡುವಂತೆ ಕುಟುಂಬವು ಸಾರ್ವಜನಿಕರಲ್ಲಿ ಕಳಕಳಿಯ ಮನವಿ ಮಾಡಿಕೊಂಡಿದೆ.

ಖಾತೆ ವಿವರ:

ಹೆಸರು : Akshatha Kumari B
ಖಾತೆ ಸಂಖ್ಯೆ : 50100342289599
ಬ್ಯಾಂಕ್ : HDFC ಬ್ಯಾಂಕ್
ಶಾಖೆ : ಮೂಡುಬಿದಿರೆ
IFSC ಕೋಡ್ : HDFC0002324

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...