ಬಾಲಿಕ ಜೈನ್ ಗೆ ಅಬ್ಬಕ್ಕ ಪ್ರೇರಣಾ ಗೌರವ ಪುರಸ್ಕಾರ

Date:

ಮೂಡುಬಿದಿರೆ: ವೀರರಾಣಿ ಅಬ್ಬಕ್ಕ ಅವರ 500 ನೇ ವರ್ಷಚಾರಣೆಯ ಸಂಭ್ರಮದ ಪ್ರಯುಕ್ತ ಜವನೆರ್ ಬೆದ್ರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಅಬ್ಬಕ್ಕ ಪ್ರೇರಣಾ ಗೌರವ ಪುರಸ್ಕಾರಕ್ಕೆ ತುಳು ರಂಗಭೂಮಿಯಲ್ಲಿ ಸೇವೆ ಮಾಡುತ್ತಿರುವ ಬಾಲಿಕ ಜೈನ್ ಅವರು ಆಯ್ಕೆಯಾಗಿದ್ದಾರೆ.

ಬಾಲಿಕ ಜೈನ್ ರವರು ಸುಮಾರು 12 ವರ್ಷಗಳ ಕಾಲ ಸಮಾಜ ಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಮತ್ತು ಮುಖ್ಯಸ್ಥಳಾಗಿ ಕಾರ್ಯನಿರ್ವಹಿಸಿದ್ದು ಹತ್ತು ಹಲವಾರು ಸಾರ್ವಜನಿಕ ವಲಯದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದಲ್ಲದೆ ನಿರೂಪಕಿಯಾಗಿ, ತೀರ್ಪುಗಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಭಾಗಹಿಸಿರುತ್ತಾರೆ.


ಪ್ರಸ್ತುತ ತುಳು ರಂಗಭೂಮಿಯಲ್ಲಿ ಸುಮಾರು 25 ವರ್ಷಗಳ ಇತಿಹಾಸ ವಿರುವ ಬಹುಪ್ರಶಂಸನೀಯ ಹೆಸರಾಂತ ನಾಟಕ ತಂಡ”ಕುರಾಲ್ ಕಲಾವಿದೆರ್ ಬೆದ್ರ” ತಂಡದ ಸಾರಥ್ಯವನ್ನು ವಹಿಸಿಕೊಂಡಿದ್ದು ಸಮಗ್ರ ನಿರ್ವಾಹಕಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತುಳುರಂಗಭೂಮಿಯಲ್ಲಿಯೇ ಪ್ರಪ್ರಥಮ ಬಾರಿಗೆ ಕರಾವಳಿ ಪ್ರದೇಶದ ಪ್ರಮುಖ ಸಾಂಪ್ರದಾಯಿಕ ಕಲೆಯಾದ ಕುಣಿತ ಭಜನೆಯನ್ನು ಇವರ ನಾಟಕದಲ್ಲಿ ಅಳವಡಿಸಿಕೊಂಡು ಎಲ್ಲಿಯೂ ಅದಕ್ಕೆ ಧಕ್ಕೆ ಬಾರದ ಹಾಗೆ ಪ್ರದರ್ಶನ ನೀಡಿ ತುಳು ಭಾಷೆ ಮತ್ತು ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಸಾಮಾಜಿಕ ಸಾಂಸ್ಕೃತಿಕ ಜಾಗೃತಿಯನ್ನು ಮೂಡಿಸುವಲ್ಲಿ ಯಶಸ್ವಿಯಾಗಿ, ಜನ ಮೆಚ್ಚುಗೆಯನ್ನು ಗಳಿಸಿದ ಹೆಗ್ಗಳಿಕೆ ಇವರದ್ದಾಗಿದ್ದೆ.


ತುಳು ರಂಗಭೂಮಿಗೆ ಸಲ್ಲಿಸುತ್ತಿರುವ ಕಲಾ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳ ವತಿಯಿಂದ ಇವರನ್ನು ಸನ್ಮಾನಿಸಲಾಗಿದೆ. ನಿರೂಪಣೆ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ರಂಗಭೂಮಿ ಕ್ಷೇತ್ರದಲ್ಲಿನ ಇವರ ಅವಿರತ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...