ಉಳ್ಳಾಲ: ದೇರಳಕಟ್ಟೆಯ ಬದ್ರಿಯಾ ಜುಮಾ ಮಸೀದಿ ಅಧೀನದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಇದರ ವತಿಯಿಂದ ಏಕದಿನ ಧಾರ್ಮಿಕ ಪ್ರವಚನ ಕಾರ್ಯಕ್ರಮ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.
ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಖತೀಬ್ ಮೊಹಮ್ಮದ್ ತಾಜುದ್ದೀನ್ ರಹ್ಮಾನಿ ದುಅ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಅಧ್ಯಕ್ಷ ಇಲ್ಯಾಸ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಅಬೂಬಕ್ಕರ್ ಸಿದ್ದೀಕ್ ಅಝ್ ಹರಿ ಪಯ್ಯನ್ನೂರು ಮುಖ್ಯ ಪ್ರಭಾಷಣಗೈದರು.

ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಗೌರವಾಧ್ಯಕ್ಷ ಅಬ್ದುಲ್ ಖಾದರ್, ಅಧ್ಯಕ್ಷ ಅಬ್ದುಲ್ ಆರ್. ರಹ್ಮಾನ್ ಶೇಟ್, ಮಾಜಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ, ಅಬೂಬಕ್ಕರ್ ಹಾಜಿ ನಾಟೆಕಲ್, ಬೆಳ್ಮ ಗ್ರಾ.ಪಂ ಸದಸ್ಯ ಇಕ್ಬಾಲ್ ಎಚ್.ಆರ್, ಹಯಾತುಲ್ ಇಸ್ಲಾಂ ಮದರಸ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಎಂ ಇಬ್ರಾಹೀಂ ಕತ್ತಾರ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಉಪಾಧ್ಯಕ್ಷ ಇಸ್ಮಾಯಿಲ್ ರಹ್ಮಾತುಲ್ಲಾ ಉಪಸ್ಥಿತರಿದ್ದರು.
ಹದಾಯತುಲ್ ಇಸ್ಲಾಂ ಮದರಸ ಅಧ್ಯಾಪಕ ಮುಸ್ಫೀಕ್ ಯಾಮಾನಿ ಕಿರಾತ್ ಪಠಿಸಿದರು.

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಪ್ರ.ಕಾರ್ಯದರ್ಶಿ ಅಬ್ದುಲ್ ಮುತ್ತಲಿಬ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶಿಹಾಬುದ್ದೀನ್.ಡಿ ವಂದಿಸಿದರು. ಹದಾಯತುಲ್ ಇಸ್ಲಾಂ ಮದರಸ ಅಧ್ಯಾಪಕ ಝಕರಿಯ್ಯಾ ಅಸ್ಲಾಮಿ ಕಾರ್ಯಕ್ರಮ ನಿರೂಪಿಸಿದರು.



