ಚೀನಾದ ಸಾಗಾದಲ್ಲಿ ಸಿಲುಕಿದ ಕರ್ನಾಟಕದ 23 ಪ್ರವಾಸಿಗರು: ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಭಾರತೀಯ ರಾಯಭಾರಿಗೆ ಡಾ. ಆರತಿ ಕೃಷ್ಣ ಮನವಿ

Date:


ಬೆಂಗಳೂರು, ಆ.28: ಕೈಲಾಸ ಪರ್ವತ ಹಾಗೂ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ 23 ಮಂದಿ ಪ್ರವಾಸಿಗರು ಚೀನಾದ ದರ್ಚೆನ್‌ನಲ್ಲಿ ಸಿಲುಕಿಕೊಂಡಿದ್ದು, ಇದೀಗ ಸಾಗಾ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಸಾಗಾದಿಂದ ಸಮೀಪದ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಪ್ರವಾಸಿಗರಿಗೆ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ವಿಮಾನದ ಮೂಲಕ ಸ್ಥಳಾಂತರಿಸಲು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವಂತೆ ಡಾ. ಆರತಿ ಕೃಷ್ಣ ಅವರು ಚೀನಾದ ಬೀಜಿಂಗ್‌ನಲ್ಲಿರುವ ಭಾರತದ ರಾಯಭಾರಿ ವಿಕ್ರಮ್ ಕೆ. ದೊರೈಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.
ಆ.26ರಂದು ಕೈಲಾಸ ಪರ್ವತ ಹಾಗೂ ಮಾನಸ ಸರೋವರಕ್ಕೆ ಭೇಟಿ ನೀಡಿದ್ದ ಕರ್ನಾಟಕದ 23 ಮಂದಿ ಪ್ರವಾಸಿಗರು ದರ್ಚೆನ್‌ನಲ್ಲಿ ಸಿಲುಕಿಕೊಂಡಿದ್ದರು. ಪ್ರವಾಸ ಆಯೋಜಕರು ಅವರನ್ನು ಸಾಗಾಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಲ್ಲಿಂದ ಸಮೀಪದ ವಿಮಾನ ನಿಲ್ದಾಣಕ್ಕೆ ರಸ್ತೆ ಸಂಪರ್ಕದ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ.
ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ಕ್ರಮ ಕೈಗೊಂಡು ಅವರನ್ನು ವಿಮಾನದ ಮೂಲಕ ಸ್ಥಳಾಂತರಿಸಲು ಅಥವಾ ಯಾವುದೇ ಪರ್ಯಾಯ ಮಾರ್ಗದ ಮೂಲಕ ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲು ಅಗತ್ಯ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಪ್ರವಾಸಿಗರೊಂದಿಗೆ ಸಂಪರ್ಕ ಸಾಧಿಸಲು ಹೇಮಂತ್ ಅವರನ್ನು ಸಂಪರ್ಕಿಸಬಹುದೆಂದು ಪತ್ರದಲ್ಲಿ ತಿಳಿಸಲಾಗಿದೆ.
ಈ 23 ಮಂದಿ ಕರ್ನಾಟಕದ ಪ್ರವಾಸಿಗರ ಸುರಕ್ಷಿತ ವಾಪಸಾತಿಗಾಗಿ ಭಾರತೀಯ ರಾಯಭಾರ ಕಚೇರಿ ಅಗತ್ಯ ಕ್ರಮ ಕೈಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೇತುವೆ ಕುಸಿತ: ತಕ್ಷಣ ಸ್ಪಂದಿಸಿದ ಬಜ್ಪೆ ನಾಗರಿಕರಕ್ಷಣಾ ವೇದಿಕೆ – ಎರಡು ದಿನಗಳಲ್ಲಿ ಪರ್ಯಾಯ ರಸ್ತೆ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

ಬಜ್ಪೆ, ಮಂಗಳೂರು–ಬಜ್ಪೆ–ಕಟ್ಟೀಲ್ ರಾಜ್ಯ ಹೆದ್ದಾರಿಯ ಕರಬಾರು ಸಮೀಪದಲ್ಲಿರುವ ಸೇತುವೆ ಕುಸಿದು ವಾಹನ...

ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಗೊಂದಲ – ಅಕೀಮ್ ಕೂರ್ನಡ್ಕ ಆಸ್ಪತ್ರೆಗೆ ದಾಖಲು

ಪುತ್ತೂರು: ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಉಂಟಾದ ಗೊಂದಲ ಹಾಗೂ ಉದ್ವಿಗ್ನ...

ಸೆ.ಬಂಟ್ಸ್ ಹಾಸ್ಟೆಲ್, ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು...