VL TV Kannada

1363 POSTS

Exclusive articles:

ಸೆ.30ರಂದು ಕಣಚೂರು ಸ್ಕೂಲ್ ಕ್ಯಾಂಪಸ್‌ನಲ್ಲಿ ಮೇಲ್ತೆನೆಯ ‘ಪತ್ತನೆ ವರ್ಸತ್ತೆ ಜಲ್ಸ್‌’ ಕಾರ್ಯಕ್ರಮ

ದೇರಳಕಟ್ಟೆ, ಸೆ.23: ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ (ಮೇಲ್ತೆನೆ)ದ ದಶಮಾನೋತ್ಸವ (ಪತ್ತನೆ ವರ್ಸತ್ತೆ ಜಲ್ಸ್-2025) ಕಾರ್ಯಕ್ರಮವು ಸೆ.30ರಂದು ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9:30ಕ್ಕೆ ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹೀಂ...

ಎಲ್ಲ ಭಾಷೆಗಳ ಉದ್ದೇಶ ಮನುಕುಲದ ಉದ್ಧಾರ: ಮಂಗಳೂರು ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಪುರುಷೋತ್ತಮ ಬಿಳಿಮಲೆ ಅನಿಸಿಕೆ

ಮಂಗಳೂರು: ಭಾರತ ಹಲವು ಭಾಷೆಗಳ ರಂಗೋಲಿ. ಎಲ್ಲ ಭಾಷೆಗಳ ಉದ್ದೇಶ ಮನುಕುಲದ ಉದ್ಧಾರ. ಇಲ್ಲಿ ಯಾವುದೇ ಭಾಷೆಯನ್ನು ಸಾಯಲು ಬಿಡಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು. ಕುದ್ರೋಳಿ ಶ್ರೀ...

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರುನ ತಿಂಗಳ ನಾಟಕ ಸಂಭ್ರಮದಡಿಯಲ್ಲಿ ಕನ್ನಡ ಕಲಾ ಕೇಂದ್ರ ಮುಂಬಯಿ ಪ್ರದರ್ಶಿಸಿದ ‘ಚೌಕಟ್ಟಿನಾಚೆಯ ಚಿತ್ರ’ ನಾಟಕ 

ಬೆಂಗಳೂರು,ಸೆ.22: ಬೆಂಗಳೂರುನ ಮಲ್ಲತ್ತಹಳ್ಳಿಯಲ್ಲಿ ಅಲ್ಲಿನ ಕಲಾಗ್ರಾಮ ಸಮುಚ್ಛಯ ಭವನದಲ್ಲಿ ಕಳೆದ ಶನಿವಾರ (ಸೆ.20) ಸಂಜೆ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ತಿಂಗಳ ನಾಟಕ ಸಂಭ್ರಮದಡಿಯಲ್ಲಿ  ನಡೆಸಿದ ನಾಟಕ ಪ್ರದರ್ಶನದಲ್ಲಿ ಮುಂಬಯಿಯ ಕನ್ನಡ ಕಲಾ ಕೇಂದ್ರವು ಲೈಂಗಿಕ ಅಲ್ಪಸಂಖ್ಯಾತರ ಬದುಕಿನ ಕುರಿತ ವಿಭಿನ್ನ ರೀತಿಯ ‘ಚೌಕಟ್ಟಿನಾಚೆಯ ಚಿತ್ರ’ ನಾಟಕವನ್ನು ಪ್ರಸ್ತುತಪಡಿಸಿತ್ತು.  ನಾಟಕದ ಬಳಿಕ ಕರ್ನಾಟಕ ನಾಟಕ ಅಕಾಡೆಮಿಯು ಕನ್ನಡ ಕಲಾ ತಂಡದ ನಾಟಕಕಾರ, ನಿರ್ದೇಶಕ ಸಾ.ದಯಾ ಹಾಗೂ ಅವರ ಕಲಾವಿದರೊಂದಿಗೆ ಲೈಂಗಿಕ ಅಲ್ಪ ಸಂಖ್ಯಾತರ ಬಿಕ್ಕಟ್ಟು, ಅವಮಾನಗಳನ್ನು ಸ್ವತಃ ಅನುಭವಿಸಿ, ತನ್ನ ಸಮುದಾಯದ ಹಕ್ಕುಗಳಿಗಾಗಿ, ಹೋರಾಡುತ್ತಿರುವ, ಶ್ರಮಿಸುತ್ತಿರುವ ದಿಟ್ಟ ಮಹಿಳೆ ಅಕೈ ಪದ್ಮಶಾಲಿ ಅವರ ಸಂವಾದವನ್ನು ಏರ್ಪಡಿಸಿತ್ತು. ಸಂವಾದದಲ್ಲಿ ಅಕೈ, ಮುಂಬಯಿ ತಂಡದ ಶ್ರಮವನ್ನು ಮತ್ತು ನಾಟಕವನ್ನು ಶ್ಲಾಘಿಸುತ್ತ, ಈ ನಾಟಕ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಯೋಗಗೊಳ್ಳಬೇಕು. ಹೆಚ್ಚು ಹೆಚ್ಚು ಪ್ರಯೋಗಗಾಳುಗುವ ಮೂಲಕ, ಲೈಂಗಿಕ ಅಲ್ಪ ಸಂಖ್ಯಾತರನ್ನು ಸಮಾಜ ನಡೆಸಿಕೊಳ್ಳುವ ಹೀನ ರೀತಿ, ಅವರ ನೋವು ಹಾಗೂ ಬಿಟ್ಟಕ್ಕುಗಳು ಹೆಚ್ಚು ಜನರಿಗೆ ತಲುಪುವಂತಾಬೇಕು ಎಂದರು. ಈ ನಾಟಕದಲ್ಲಿ ಲೈಂಗಿಕ ಅಲ್ಪ ಸಂಖ್ಯಾತೆಯೊಬ್ಬಳ ಶವವನ್ನು ಅನ್ಯರು ನೋಡಬಾರದು ಅದು ಅವರಿಗೆ ಶ್ರೇಯಸ್ಸಲ್ಲ ಎನ್ನುವ ದೃಶ್ಯವೊಂದರ ಬಗ್ಗೆ ಪ್ರಸ್ತಾಪಿಸಿ, ಅದನ್ನು ಬಲವಾಗಿ ವಿರೋಧಿಸುತ್ತ ಅಂಥ ಹೀನ ಪದ್ಧತಿಗಳು ನಾಶವಾಗಿ, ಉಳಿದೆಲ್ಲರಂತೆ ಲೈಂಗಿಕ ಅಲ್ಪ ಸಂಖ್ಯಾತರಿಗೂ ಗೌರವಪೂರ್ವಕ ವಿದಾಯ ಸಲ್ಲಲೇಬೇಕು ಎಂದರು. ಚಕ್ಕಾ, ಕೋಜಾ, ಶಿಖಂಡಿ,  ಒಂಬತ್ತು, ನಾಮರ್ದ ಎಂಬ ಪದಗಳು ನಮಗೆ ಬೇಡ. ನಮ್ಮನ್ನು ಹಾಗೆ ಕರೆಯಬೇಡಿ. ಜೋಗ್ತಾ, ಜೋಗಮ್ಮ, ಅಂತರ್ ಲಿಂಗಿ, ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಅಲ್ಪಸಂಖ್ಯಾತರು, ಲಿಂಗತ್ವ ಬದಲಾಯಿಸಿ ಕೊಂಡವರು ಎಂದು ಬಳಸಿ. ನಮಗೆ ಕೆಟ್ಟ ಪದಗಳನ್ನ ಬಳಕೆ ಮಾಡಿ ಅವಮಾನಿಸಬೇಡಿ ಎಂದರು. ಸಾ.ದಯಾ ನಾಟಕ ರಚನೆಯ ಹಾಗೂ ರಂಗಕ್ಕೆ ಬಂದ ಹಿನ್ನೆಲೆಯಲ್ಲಿ ಮಾತನಾಡಿದರು. ಕಲಾವಿದೆ ಜಯಲಕ್ಷ್ಮಿ ಪಾಟೀಲ್ ಸಂಚಾಲಕತ್ವದಲ್ಲಿ ಸಂವಾದ ನಡೆಸಲ್ಪಟ್ಟಿತು. ಈ ಸಂದರ್ಭ ವೇದಿಕೆಯಲ್ಲಿ ನಾಟಕ ಅಕಾಡೆಮಿಯ ಅಧ್ಯಕ್ಷ ಕೆ.ವಿ ನಾಗರಾಜಮೂರ್ತಿ, ಕನ್ನಡ ಕಲಾ ಕೇಂದ್ರದ ಅಧ್ಯಕ್ಷ ಮಧುಸೂದನ ಟಿ.ಆರ್., ಕವಿ ಗೋಪಾಲ ತ್ರಾಸಿ ಹಾಗೂ ಅಕಾಡೆಮಿಸದಸ್ಯ ಜಿ.ಪಿ ಓ ಚಂದ್ರು, ಜಗದೀಶ ಜಾಲ, ರವೀಂದ್ರನಾಥ್ ಸಿರಿವಾರ, ಮಮತಾ ಅರಿಸೀಕೆರೆ ಉಪಸ್ಥಿತರಿದ್ದರು. ಮಧುಸೂದನ ಟಿ.ಆರ್ ಈ ನಾಟಕವನ್ನು ನಿರ್ವಹಿಸಲಿದ್ದು ಸಾ.ದಯಾ ಅವರದ್ದೇ ಬೆಳಕು  ಸಂಯೋಜನೆ, ನಯನಾ ಸಾಲ್ಯಾನ್ ಮತ್ತು ಗೀತಾ ದೇವಾಡಿಗ ವಸ್ತ್ರ ವಿನ್ಯಾಸ, ಗಣೇಶ್ ಕುಮಾರ್ ಅವರ ಕಲೆ ಮತ್ತು ರಂಗ ಪರಿಕರದೊಂದಿಗೆ ದಿವಾಕರ್ ಕಟೀಲ್ ಅವರ ಸಂಗೀತ, ವಿದ್ದು ಉಚ್ಚಿಲ್ ಅವರ ರಂಗ ವಿನ್ಯಾಸ, ಪೂರ್ಣಿಮಾ ಮಧುಸೂದನ ಟಿ.ಆರ್ ಅವರ ರಂಗ ನಿರ್ವಹಣೆ, ರಾಮಾನುಗ್ರಹ ಕ್ಯಾಟರರ್ಸ್‌ನ ಸಹಕಾರ, ಶಶಿ ಕಿರಣ್, ಸುಷ್ಮಾ ಆಚಾರ್ಯ ಅವರ ಸಾಂಗತ್ಯದಲ್ಲಿ ನಾಟಕ ಪ್ರದರ್ಶನಗೊಂಡಿತು. ಮಂಜುನಾಥ್ ಶೆಟ್ಟಿಗಾರ್ ಪ್ರಸಾಧನಗೈದಿದ್ದು, ಒಟ್ಟು 20 ಹಿರಿಕಿರಿಯ ಕಲಾವಿದರು, 32 ಭಿನ್ನಭಿನ್ನ ಪಾತ್ರಗಳನ್ನು ನಿರ್ವಹಿಸಿದರು. 

ಉಳ್ಳಾಲದಲ್ಲಿ ಮುಹಿಯಿದ್ದೀನ್ ಬಾವ , ತಾಜುಲ್ ಉಲಮಾ(ಖ.ಸಿ.) ರವರ ಆಂಡ್ ನೇರ್ಚೆ

ಉಳ್ಳಾಲ : ಪ್ರವಾದಿ ಮುಹಮ್ಮದ್ ಪೈಗಂಬರ್ (ಸ )ರವರು ವಿದ್ಯಾಭ್ಯಾಸಕ್ಕೆ ‌ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಉತ್ತಮ ಬೆಳಕು ನೀಡಿದ ವ್ಯಕ್ತಿ ಆಗಿದ್ದರು. ಸಮಾಜದ ಅಭಿವೃದ್ಧಿಗಾಗಿ ಅವರು ನೀಡಿದ ಸೇವೆಯನ್ನು ನಾವು ಜೀವನದಲ್ಲಿ...

ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಗ್ರಾಹಕ ನ್ಯಾಯಾಲಯ ತೀರ್ಪು

ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದೆ. ಘಟನೆಯ ವಿವರ ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ...

Breaking

ರವಿ ನಾಯ್ಕಾಪು ಅವರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ: 28 ಕ್ಕೆ ಮುಂಬಯಿಯಲ್ಲಿ ಪ್ರದಾನ

ಕಾಸರಗೋಡು: ನಿರೂಪಕ, ಸಂಘಟಕ, ಲೇಖಕ ರವಿ ನಾಯ್ಕಾಪು ಅವರಿಗೆ 'ನಿರೂಪಣಾ ಕೌಸ್ತುಭ'...

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...
spot_imgspot_img